<p><strong>ಮುಂಬೈ:</strong> ಕೋವಿಡ್–19 ಸೋಂಕಿನ ಎರಡನೇ ಅಲೆಯಿಂದಾಗಿ ಭಾರತದಲ್ಲಿ ಒಂದು ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಶೇ 97ರಷ್ಟು ಕುಟುಂಬಗಳ ಆದಾಯ ಕಡಿಮೆಯಾಗಿದೆ ಎಂದು ‘ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ಚಿಂತಕರ ಚಾವಡಿಯ ಮುಖ್ಯ ಕಾರ್ಯನಿರ್ವಾಹಕ ಮಹೇಶ್ ವ್ಯಾಸ್ ಹೇಳಿದ್ದಾರೆ.</p>.<p>ಸಿಎಂಐಇ ಲೆಕ್ಕಾಚಾರ ಹಾಕಿರುವ ಪ್ರಕಾರ ಏಪ್ರಿಲ್ನಲ್ಲಿ ಶೇ 8ರಷ್ಟಿದ್ದ ನಿರುದ್ಯೋಗ ದರ ಮೇ ಅಂತ್ಯದ ವೇಳೆಗೆ ಶೇ 12ಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ವ್ಯಾಸ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/business/commerce-news/monthly-gst-return-filing-deadline-extended-till-june-26-834960.html" itemprop="url">ತಿಂಗಳ ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆ: ಜೂನ್ 26ರವರೆಗೆ ಅವಕಾಶ</a></p>.<p>ಉದ್ಯೋಗ ನಷ್ಟಕ್ಕೆ ಮುಖ್ಯ ಕಾರಣ ಕೋವಿಡ್ ಎರಡನೇ ಅಲೆ. ಆರ್ಥಿಕತೆಯು ಮರಳಿ ತೆರೆದಾಗ ಸಮಸ್ಯೆಯ ಒಂದು ಭಾಗ ಪರಿಹಾರವಾಗಲಿದೆ. ಆದರೆ ಸಂಪೂರ್ಣವಾಗಿ ಬಗೆಹರಿಯದು ಎಂದು ಅವರು ಹೇಳಿದ್ದಾರೆ.</p>.<p>ಒಮ್ಮೆ ಉದ್ಯೋಗ ಕಳೆದುಕೊಂಡವರಿಗೆ ಮತ್ತೆ ಪಡೆಯುವುದು ಕಷ್ಟಕರವಾಗಿ ಪರಿಣಮಿಸಿದೆ. ಅನೌಪಚಾರಿಕ ವಲಯದಲ್ಲಿ ಉದ್ಯೋಗ ಕಳೆದುಕೊಂಡವರಿಗೆ ಬೇಗನೆ ಮರಳಿ ಪಡೆಯಲು ಸಾಧ್ಯವಾಗುತ್ತದೆ. ಆದರ, ಔಪಚಾರಿಕ ವಲಯ ಮತ್ತು ಉತ್ತಮ ಗುಣಮಟ್ಟದ ಕೆಲಸ ಕಳೆದುಕೊಂಡವರಿಗೆ ಮರಳಿ ಪಡೆಯಲು ವರ್ಷವಾದರೂ ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/business/commerce-news/eight-core-infrastructure-sectors-output-skyrockets-by-561-pc-in-april-834959.html" itemprop="url">ಮೂಲಸೌಕರ್ಯ ವಲಯದಲ್ಲಿ ಭಾರಿ ಬೆಳವಣಿಗೆ: ಕೈಗಾರಿಕಾ ಸಚಿವಾಲಯ</a></p>.<p>2020ರ ಮೇ ವೇಳೆಗೆ ದೇಶದ ನಿರುದ್ಯೋಗ ಪ್ರಮಾಣ ದಾಖಲೆ ಮಟ್ಟ ತಲುಪಿತ್ತು. ಕೋವಿಡ್ ಎರಡನೇ ಅಲೆಯು ಇದನ್ನು ಮತ್ತಷ್ಟು ಹೆಚ್ಚಿಸಿತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕೋವಿಡ್–19 ಸೋಂಕಿನ ಎರಡನೇ ಅಲೆಯಿಂದಾಗಿ ಭಾರತದಲ್ಲಿ ಒಂದು ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಶೇ 97ರಷ್ಟು ಕುಟುಂಬಗಳ ಆದಾಯ ಕಡಿಮೆಯಾಗಿದೆ ಎಂದು ‘ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ಚಿಂತಕರ ಚಾವಡಿಯ ಮುಖ್ಯ ಕಾರ್ಯನಿರ್ವಾಹಕ ಮಹೇಶ್ ವ್ಯಾಸ್ ಹೇಳಿದ್ದಾರೆ.</p>.<p>ಸಿಎಂಐಇ ಲೆಕ್ಕಾಚಾರ ಹಾಕಿರುವ ಪ್ರಕಾರ ಏಪ್ರಿಲ್ನಲ್ಲಿ ಶೇ 8ರಷ್ಟಿದ್ದ ನಿರುದ್ಯೋಗ ದರ ಮೇ ಅಂತ್ಯದ ವೇಳೆಗೆ ಶೇ 12ಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ವ್ಯಾಸ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/business/commerce-news/monthly-gst-return-filing-deadline-extended-till-june-26-834960.html" itemprop="url">ತಿಂಗಳ ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆ: ಜೂನ್ 26ರವರೆಗೆ ಅವಕಾಶ</a></p>.<p>ಉದ್ಯೋಗ ನಷ್ಟಕ್ಕೆ ಮುಖ್ಯ ಕಾರಣ ಕೋವಿಡ್ ಎರಡನೇ ಅಲೆ. ಆರ್ಥಿಕತೆಯು ಮರಳಿ ತೆರೆದಾಗ ಸಮಸ್ಯೆಯ ಒಂದು ಭಾಗ ಪರಿಹಾರವಾಗಲಿದೆ. ಆದರೆ ಸಂಪೂರ್ಣವಾಗಿ ಬಗೆಹರಿಯದು ಎಂದು ಅವರು ಹೇಳಿದ್ದಾರೆ.</p>.<p>ಒಮ್ಮೆ ಉದ್ಯೋಗ ಕಳೆದುಕೊಂಡವರಿಗೆ ಮತ್ತೆ ಪಡೆಯುವುದು ಕಷ್ಟಕರವಾಗಿ ಪರಿಣಮಿಸಿದೆ. ಅನೌಪಚಾರಿಕ ವಲಯದಲ್ಲಿ ಉದ್ಯೋಗ ಕಳೆದುಕೊಂಡವರಿಗೆ ಬೇಗನೆ ಮರಳಿ ಪಡೆಯಲು ಸಾಧ್ಯವಾಗುತ್ತದೆ. ಆದರ, ಔಪಚಾರಿಕ ವಲಯ ಮತ್ತು ಉತ್ತಮ ಗುಣಮಟ್ಟದ ಕೆಲಸ ಕಳೆದುಕೊಂಡವರಿಗೆ ಮರಳಿ ಪಡೆಯಲು ವರ್ಷವಾದರೂ ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/business/commerce-news/eight-core-infrastructure-sectors-output-skyrockets-by-561-pc-in-april-834959.html" itemprop="url">ಮೂಲಸೌಕರ್ಯ ವಲಯದಲ್ಲಿ ಭಾರಿ ಬೆಳವಣಿಗೆ: ಕೈಗಾರಿಕಾ ಸಚಿವಾಲಯ</a></p>.<p>2020ರ ಮೇ ವೇಳೆಗೆ ದೇಶದ ನಿರುದ್ಯೋಗ ಪ್ರಮಾಣ ದಾಖಲೆ ಮಟ್ಟ ತಲುಪಿತ್ತು. ಕೋವಿಡ್ ಎರಡನೇ ಅಲೆಯು ಇದನ್ನು ಮತ್ತಷ್ಟು ಹೆಚ್ಚಿಸಿತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>