‘ಮೈಸೂರು ಮತ್ತು ದಾವಣಗೆರೆಯಲ್ಲಿ ಹಕ್ಕಿಜ್ವರ ಪ್ರಕರಣ ವರದಿಯಾಗಿರುವ ಬೆನ್ನಲ್ಲೇ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಕಾಲರಾ ಇರುವುದರಿಂದ ತರಕಾರಿ ಮಳಿಗೆಗಳು, ಹಣ್ಣಿನ ಅಂಗಡಿ, ಕೋಳಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಇಂತಹ ಪ್ರಕರಣದಿಂದಲೂ ಕುಕ್ಕುಟೋದ್ಯಮಕ್ಕೆ ಹೊಡೆತ ಬಿದ್ದಿದೆ’ ಎಂದುಪಶುವೈದ್ಯ ತಜ್ಞರ ಸಂಘದ ಅಧ್ಯಕ್ಷ ಪ್ರೊ. ಜಿ. ದೇವೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.