ನವದೆಹಲಿ: ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ಮಾಡುವ ಹೂಡಿಕೆಗೆ ಸಂಬಂಧಿಸಿದಂತೆ 2018–19ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.
2013ರ ಕಂಪನಿ ಕಾಯ್ದೆಯ ಅನ್ವಯ, ವಾರ್ಷಿಕ ₹ 1 ಸಾವಿರ ಕೋಟಿ ವಹಿವಾಟು ನಡೆಸುವ ಅಥವಾ ₹ 5 ಕೋಟಿ ನಿವ್ವಳ ಲಾಭ ಹೊಂದಿರುವ ಕಂಪನಿಗಳು ಹಣಕಾಸು ವರ್ಷದಲ್ಲಿತಮ್ಮ ಮೂರು ವರ್ಷಗಳ ಸರಾಸರಿ ನಿವ್ವಳ ಲಾಭದಲ್ಲಿ ಕನಿಷ್ಠ ಶೇ 2 ರಷ್ಟನ್ನು ಸಿಎಸ್ಆರ್ ಚಟುವಟಿಕೆಗಳಿಗೆ ವೆಚ್ಚ ಮಾಡಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.