<p><strong>ಮುಂಬೈ</strong>: ಗ್ರಾಹಕರಿಂದ ಬರುತ್ತಿರುವ ದೂರುಗಳ ಸಂಖ್ಯೆಯು ಹೆಚ್ಚುತ್ತಿದ್ದರೂ ಬ್ಯಾಂಕರ್ಗಳಲ್ಲಿ ‘ಸಹಾನುಭೂತಿಯ ಕೊರತೆ ಇದೆ’ ಎಂದು ಆರ್ಬಿಐ ಡೆಪ್ಯುಟಿ ಗವರ್ನರ್ ಸ್ವಾಮಿನಾಥನ್ ಜೆ. ಹೇಳಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ಒಂದೇ ಬಗೆಯ ಇ–ಮೇಲ್ ಪ್ರತಿಕ್ರಿಯೆಗಳನ್ನು ಕಂಡು ಗ್ರಾಹಕರು ತೃಪ್ತಿಪಟ್ಟುಕೊಳ್ಳಬೇಕಾಗಿದೆ’ ಎಂದು ಹೇಳಿದ್ದಾರೆ. ಬ್ಯಾಂಕರ್ಗಳು ಜನರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದಾದರೆ ಇಂತಹ ಸಮಸ್ಯೆಗಳನ್ನು ಪರಿಹರಿಸಬೇಕಿರುವುದು ಅಗತ್ಯ ಎಂದು ಅವರು ಹೇಳಿದ್ದಾರೆ.</p>.<p>ಅವರು ಜುಲೈ 12ರಂದು ನಡೆದ ಕಾರ್ಯಕ್ರಮದಲ್ಲಿ ಈ ಮಾತು ಹೇಳಿದ್ದಾರೆ. ಅವರ ಭಾಷಣದ ಪಠ್ಯವನ್ನು ಆರ್ಬಿಐ ಜಾಲತಾಣದಲ್ಲಿ ಮಂಗಳವಾರ ಪ್ರಕಟಿಸಲಾಗಿದೆ.</p>.<p>‘ಗ್ರಾಹಕರು ಡಿಜಿಟಲ್ ಮಾರ್ಗಗಳ ಮೂಲಕ ದೂರು ನೀಡುವುದು ಈಚಿನ ವರ್ಷಗಳಲ್ಲಿ ಹೆಚ್ಚಾಗಿದೆ... ಆದರೆ ಹೆಚ್ಚಿನ ಸಂದರ್ಭಗಳಲ್ಲಿ ಸಮಸ್ಯೆ ಇರುವುದು ಉತ್ಪನ್ನ ಅಥವಾ ಸೇವೆಯಲ್ಲಿ ಅಲ್ಲ. ಸಹಾನುಭೂತಿಯ ಕೊರತೆಯೇ ನಿಜವಾದ ಸಮಸ್ಯೆಯಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ತಂತ್ರಜ್ಞಾನವು ವಹಿವಾಟನ್ನು ಸಾಧ್ಯವಾಗಿಸಿಕೊಡುತ್ತದೆ. ಆದರೆ ನೀವು ಮಾತ್ರ ಸಂಬಂಧವನ್ನು ಕಟ್ಟಿಕೊಳ್ಳಬಲ್ಲಿರಿ. ನಿಮ್ಮ ಸಂಸ್ಥೆಯ ಪರವಾಗಿ ನೀವು ಮಾತ್ರ ಗ್ರಾಹಕರ ವಿಶ್ವಾಸವನ್ನು ಗಳಿಸಬಲ್ಲಿರಿ’ ಎಂದು ಅವರು ಹೇಳಿದ್ದಾರೆ. ಬ್ಯಾಂಕರ್ಗೂ ಆ್ಯಪ್ಗೂ ಇರುವ ವ್ಯತ್ಯಾಸವೇ ಇದು ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಗ್ರಾಹಕರಿಂದ ಬರುತ್ತಿರುವ ದೂರುಗಳ ಸಂಖ್ಯೆಯು ಹೆಚ್ಚುತ್ತಿದ್ದರೂ ಬ್ಯಾಂಕರ್ಗಳಲ್ಲಿ ‘ಸಹಾನುಭೂತಿಯ ಕೊರತೆ ಇದೆ’ ಎಂದು ಆರ್ಬಿಐ ಡೆಪ್ಯುಟಿ ಗವರ್ನರ್ ಸ್ವಾಮಿನಾಥನ್ ಜೆ. ಹೇಳಿದ್ದಾರೆ.</p>.<p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ‘ಒಂದೇ ಬಗೆಯ ಇ–ಮೇಲ್ ಪ್ರತಿಕ್ರಿಯೆಗಳನ್ನು ಕಂಡು ಗ್ರಾಹಕರು ತೃಪ್ತಿಪಟ್ಟುಕೊಳ್ಳಬೇಕಾಗಿದೆ’ ಎಂದು ಹೇಳಿದ್ದಾರೆ. ಬ್ಯಾಂಕರ್ಗಳು ಜನರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದಾದರೆ ಇಂತಹ ಸಮಸ್ಯೆಗಳನ್ನು ಪರಿಹರಿಸಬೇಕಿರುವುದು ಅಗತ್ಯ ಎಂದು ಅವರು ಹೇಳಿದ್ದಾರೆ.</p>.<p>ಅವರು ಜುಲೈ 12ರಂದು ನಡೆದ ಕಾರ್ಯಕ್ರಮದಲ್ಲಿ ಈ ಮಾತು ಹೇಳಿದ್ದಾರೆ. ಅವರ ಭಾಷಣದ ಪಠ್ಯವನ್ನು ಆರ್ಬಿಐ ಜಾಲತಾಣದಲ್ಲಿ ಮಂಗಳವಾರ ಪ್ರಕಟಿಸಲಾಗಿದೆ.</p>.<p>‘ಗ್ರಾಹಕರು ಡಿಜಿಟಲ್ ಮಾರ್ಗಗಳ ಮೂಲಕ ದೂರು ನೀಡುವುದು ಈಚಿನ ವರ್ಷಗಳಲ್ಲಿ ಹೆಚ್ಚಾಗಿದೆ... ಆದರೆ ಹೆಚ್ಚಿನ ಸಂದರ್ಭಗಳಲ್ಲಿ ಸಮಸ್ಯೆ ಇರುವುದು ಉತ್ಪನ್ನ ಅಥವಾ ಸೇವೆಯಲ್ಲಿ ಅಲ್ಲ. ಸಹಾನುಭೂತಿಯ ಕೊರತೆಯೇ ನಿಜವಾದ ಸಮಸ್ಯೆಯಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ತಂತ್ರಜ್ಞಾನವು ವಹಿವಾಟನ್ನು ಸಾಧ್ಯವಾಗಿಸಿಕೊಡುತ್ತದೆ. ಆದರೆ ನೀವು ಮಾತ್ರ ಸಂಬಂಧವನ್ನು ಕಟ್ಟಿಕೊಳ್ಳಬಲ್ಲಿರಿ. ನಿಮ್ಮ ಸಂಸ್ಥೆಯ ಪರವಾಗಿ ನೀವು ಮಾತ್ರ ಗ್ರಾಹಕರ ವಿಶ್ವಾಸವನ್ನು ಗಳಿಸಬಲ್ಲಿರಿ’ ಎಂದು ಅವರು ಹೇಳಿದ್ದಾರೆ. ಬ್ಯಾಂಕರ್ಗೂ ಆ್ಯಪ್ಗೂ ಇರುವ ವ್ಯತ್ಯಾಸವೇ ಇದು ಎಂದಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>