ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಸ್ತಿ ತಡೆಗೆ ಕಾಮತ್‌ ನೇತೃತ್ವದಲ್ಲಿ ಸಮಿತಿ

Last Updated 7 ಆಗಸ್ಟ್ 2020, 21:38 IST
ಅಕ್ಷರ ಗಾತ್ರ

ಮುಂಬೈ: ಕೊರೊನಾ ವೈರಾಣುವಿನ ಕಾರಣದಿಂದಾಗಿ ಕೆಲವು ಸಾಲಗಳು ಸುಸ್ತಿಯಾಗುವುದನ್ನು ತಡೆಯಲು ಕ್ರಮಗಳನ್ನು ಸೂಚಿಸುವಂತೆ ಕೋರಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಕೆ.ವಿ. ಕಾಮತ್ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಿದೆ.

ಈ ಸಮಿತಿಯು ಮೂವತ್ತು ದಿನಗಳಲ್ಲಿ ತನ್ನ ಶಿಫಾರಸುಗಳನ್ನು ಸಲ್ಲಿಸಬೇಕಿದೆ. ದಿವಾಕರ್ ಗುಪ್ತ, ಟಿ.ಎನ್. ಮನೋಹರನ್, ಅಶ್ವಿನ್ ಪಾರೇಖ್ ಅವರು ಈ ಸಮಿತಿಯ ಸದಸ್ಯರಾಗಿ ಇರಲಿದ್ದಾರೆ.

ಭಾರತೀಯ ಬ್ಯಾಂಕ್‌ಗಳ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಈ ಸಮಿತಿಯ ಸದಸ್ಯ ಕಾರ್ಯದರ್ಶಿ ಆಗಿರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT