‘ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ತೀರ್ಮಾನ ಕೈಗೊಳ್ಳುವ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ. ಹಲವು ಆರ್ಥಿಕ ಪರಿಣಾಮಗಳ ಕಡೆಗೆ ಸರ್ಕಾರ ಗಮನ ಹರಿಸುತ್ತಿದೆ. ಅಕ್ಟೋಬರ್ 1ರ ವೇಳೆಗೆ ಈ ಕುರಿತ ಪ್ರಮಾಣಪತ್ರವನ್ನು ಸಲ್ಲಿಸಲಾಗುವುದು. ಅದರ ಪ್ರತಿಗಳನ್ನು ಇ–ಮೇಲ್ ಮೂಲಕ ಅರ್ಜಿದಾರರಿಗೆ ಕಳುಹಿಸಲಾಗುವುದು’ ಎಂದು ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್ಗೆ ತಿಳಿಸಿದರು.