ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊಕಾನ್‌ ಸಾಲ ಹಗರಣ: ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚರ್ ಪತಿಗೆ ಜಾಮೀನು

Last Updated 25 ಮಾರ್ಚ್ 2021, 8:28 IST
ಅಕ್ಷರ ಗಾತ್ರ

ಮುಂಬೈ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿದ್ದ ದೀಪಕ್ ಕೊಚ್ಚಾರ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು.

ವಿಡಿಯೊಕಾನ್‌ ಸಮೂಹಕ್ಕೆ ಬ್ಯಾಂಕ್‌ನಿಂದ ಸಾಲ ನೀಡುವ ಮೂಲಕ ಅಕ್ರಮ ಹಣ ವರ್ಗಾವಣೆಗೆ ನೆರವು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಕೊಚ್ಚಾರ್‌ ದಂಪತಿಯ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು 2020ರ ಆರಂಭದಲ್ಲಿ ಚಂದಾ ಅವರಿಗೆ ಸೇರಿದ್ದ ₹78 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದರು.

ಏನಿದು ಹಗರಣ?

ವಿಡಿಯೊಕಾನ್ ಸಂಸ್ಥೆಯು 2009ರಿಂದ 2011ರ ನಡುವೆ ಐಸಿಐಸಿಐ ಬ್ಯಾಂಕ್‌ನಿಂದ ₹1,875 ಕೋಟಿ ಹಣವನ್ನು ಸಾಲ ಪಡೆದಿತ್ತು. ವಿಡಿಯೊಕಾನ್ ದೀಪಕ್ ಕೊಚ್ಚಾರ್‌ ಹಾಗೂ ಚಂದಾ ಕೊಚ್ಚಾರ್ ನೇತೃತ್ವದ ನುಪವರ್ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿತ್ತು. ಇದಾದ ಹತ್ತು ತಿಂಗಳ ನಂತರ ಸಿಬಿಐ ಪ್ರಾಥಮಿಕ ತನಿಖೆ ಕೈಗೊಂಡಿತ್ತು.

ವಿಡಿಯೊಕಾನ್‌ ಕಂಪೆನಿಯು ನುಪವರ್‌ ರಿನೆವೆಬಲ್ಸ್‌ ಜತೆ ಸೇರಿ ಹೊಸ ಯೋಜನೆಯೊಂದನ್ನು ಕೈಗೆತ್ತಿಕೊಂಡಿತ್ತು. ನುಪವರ್‌ ಕಂಪೆನಿ ಚಂದಾ ಕೊಚ್ಚಾರ್‌ ಅವರ ಪತಿ ಪವನ ವಿದ್ಯುತ್‌ ಉದ್ಯಮಿ ದೀಪಕ್‌ ಕೊಚ್ಚಾರ್‌ ಅವರದ್ದು. ‘ವಿಡಿಯೊಕಾನ್‌ಗೆ ಐಸಿಐಸಿಐ ಭಾರೀ ಸಾಲ ನೀಡಲು ಚಂದಾ ಅವರ ಪತಿಯ ಹಿತಾಸಕ್ತಿಯೇ ಕಾರಣ’ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT