<p><strong>ನವದೆಹಲಿ:</strong> ಅಕ್ಷಯ ತೃತೀಯದಂದು ದೇಶದ ರಾಜಧಾನಿ ದೆಹಲಿಯು 21 ಸಾವಿರ ಮದುವೆಗಳಿಗೆ ಸಾಕ್ಷಿಯಾಗಿದೆ.</p>.<p>ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯವು ಮಂಗಳಕರವಾಗಿದೆ. ಹಾಗಾಗಿ, ಈ ದಿನದಂದು ಹಿಂದೂ ಕುಟುಂಬಸ್ಥರು ವಧು–ವರರ ವಿವಾಹ ಮಾಡುವುದು ವಾಡಿಕೆ.</p>.<p class="bodytext">ಸಾವಿರಾರು ಸಂಖ್ಯೆಯಲ್ಲಿ ಮದುವೆ ಕಾರ್ಯಕ್ರಮ ಜರುಗುತ್ತಿವೆ. ಇದರಿಂದ ಕಲ್ಯಾಣ ಮಂಟಪ, ಹೋಟೆಲ್, ಅಡುಗೆ, ಸಲೂನ್, ಅಲಂಕಾರ, ಆರ್ಕೆಸ್ಟ್ರಾಕ್ಕೆ ಬೇಡಿಕೆ ಹೆಚ್ಚಿದೆ. ಬುಧವಾರ ಒಂದೇ ದಿನ ₹1 ಸಾವಿರ ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ದೆಹಲಿಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಂದಾಜಿಸಿದೆ.</p>.<p>ಔತಣಕೂಟದ ಸಭಾಂಗಣ ಮತ್ತು ಹೋಟೆಲ್ಗಳ ಬಾಡಿಗೆ ದರವು ಶೇ 10ರಿಂದ ಶೇ 15ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.</p>.<p>‘ದೆಹಲಿಯಲ್ಲಿ ಚಿನ್ನ ಮತ್ತು ಬೆಳ್ಳಿ ಖರೀದಿಯ ವಹಿವಾಟು ಒಂದೇ ದಿನ ₹200 ಕೋಟಿ ದಾಟಿದೆ. ಬೆಲೆ ಏರಿಕೆಯಿಂದಾಗಿ ಗ್ರಾಹಕರು ಹಗುರ ಆಭರಣಗಳ ಖರೀದಿಗೆ ಹೆಚ್ಚು ಆಸಕ್ತಿ ತೋರಿದ್ದಾರೆ’ ಎಂದು ಮಹಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿನ್ನದ ವ್ಯಾಪಾರಿ ಗುರ್ಮೀತ್ ಅರೋರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಕ್ಷಯ ತೃತೀಯದಂದು ದೇಶದ ರಾಜಧಾನಿ ದೆಹಲಿಯು 21 ಸಾವಿರ ಮದುವೆಗಳಿಗೆ ಸಾಕ್ಷಿಯಾಗಿದೆ.</p>.<p>ಹಿಂದೂ ಪಂಚಾಂಗದ ಪ್ರಕಾರ ಅಕ್ಷಯ ತೃತೀಯವು ಮಂಗಳಕರವಾಗಿದೆ. ಹಾಗಾಗಿ, ಈ ದಿನದಂದು ಹಿಂದೂ ಕುಟುಂಬಸ್ಥರು ವಧು–ವರರ ವಿವಾಹ ಮಾಡುವುದು ವಾಡಿಕೆ.</p>.<p class="bodytext">ಸಾವಿರಾರು ಸಂಖ್ಯೆಯಲ್ಲಿ ಮದುವೆ ಕಾರ್ಯಕ್ರಮ ಜರುಗುತ್ತಿವೆ. ಇದರಿಂದ ಕಲ್ಯಾಣ ಮಂಟಪ, ಹೋಟೆಲ್, ಅಡುಗೆ, ಸಲೂನ್, ಅಲಂಕಾರ, ಆರ್ಕೆಸ್ಟ್ರಾಕ್ಕೆ ಬೇಡಿಕೆ ಹೆಚ್ಚಿದೆ. ಬುಧವಾರ ಒಂದೇ ದಿನ ₹1 ಸಾವಿರ ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ದೆಹಲಿಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಂದಾಜಿಸಿದೆ.</p>.<p>ಔತಣಕೂಟದ ಸಭಾಂಗಣ ಮತ್ತು ಹೋಟೆಲ್ಗಳ ಬಾಡಿಗೆ ದರವು ಶೇ 10ರಿಂದ ಶೇ 15ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.</p>.<p>‘ದೆಹಲಿಯಲ್ಲಿ ಚಿನ್ನ ಮತ್ತು ಬೆಳ್ಳಿ ಖರೀದಿಯ ವಹಿವಾಟು ಒಂದೇ ದಿನ ₹200 ಕೋಟಿ ದಾಟಿದೆ. ಬೆಲೆ ಏರಿಕೆಯಿಂದಾಗಿ ಗ್ರಾಹಕರು ಹಗುರ ಆಭರಣಗಳ ಖರೀದಿಗೆ ಹೆಚ್ಚು ಆಸಕ್ತಿ ತೋರಿದ್ದಾರೆ’ ಎಂದು ಮಹಾಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿನ್ನದ ವ್ಯಾಪಾರಿ ಗುರ್ಮೀತ್ ಅರೋರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>