ನವದೆಹಲಿ: ಆರ್ಥಿಕ ನೀತಿಗಳಿಗೆ ಸಂಬಂಧಿಸಿದ ವಿಚಾರಗಳ ಪರಾಮರ್ಶೆಯಲ್ಲಿ ನ್ಯಾಯಾಂಗದ ವ್ಯಾಪ್ತಿ ಸೀಮಿತವಾಗಿದ್ದರೂ, ನ್ಯಾಯಾಲಯವು ಕೈಕಟ್ಟಿ ಕೂರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ, ಸರ್ಕಾರವು ತೀರ್ಮಾನವೊಂದನ್ನು ಯಾವ ಬಗೆಯಲ್ಲಿ ಕೈಗೊಂಡಿತ್ತು ಎಂಬುದನ್ನು ಯಾವುದೇ ಸಂದರ್ಭದಲ್ಲಿ ತಾನು ಪರಿಶೀಲಿಸಬಹುದು ಎಂದು ಹೇಳಿದೆ.