<p><strong>ನವದೆಹಲಿ:</strong> 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸಲು ಸುಧಾರಣೆಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.</p>.<p>ಕೇಂದ್ರ ಬಜೆಟ್ಗೆ ಪೂರ್ವಭಾವಿಯಾಗಿ ಹಿರಿಯ ಅರ್ಥಶಾಸ್ತ್ರಜ್ಞರ ಜೊತೆ ಅವರು ಸಮಾಲೋಚನೆ ನಡೆಸಿದರು. ‘ಆತ್ಮನಿರ್ಭರತೆ ಮತ್ತು ರಾಚನಿಕ ಪರಿವರ್ತನೆ: ವಿಕಸಿತ ಭಾರತಕ್ಕೆ ಕಾರ್ಯಸೂಚಿ’ ಎಂಬ ವಿಷಯವಾಗಿ ಸಮಾಲೋಚನೆ ನಡೆಯಿತು.</p>.<p>ದೇಶವು ನೀತಿ ನಿರೂಪಣೆ ಸಂದರ್ಭದಲ್ಲಿ ಹಾಗೂ ಬಜೆಟ್ ರೂಪಿಸುವಾಗ 2047ರ ಗುರಿಗಳ ಮೇಲೆ ಗಮನ ಇರಿಸಿರಬೇಕು ಎಂದು ಅವರು ಒತ್ತಿಹೇಳಿದರು.</p>.<p class="bodytext">ತಯಾರಿಕೆ ಹಾಗೂ ಸೇವಾ ವಲಯಗಳ ಉತ್ಪಾದಕತೆ ಮತ್ತು ಸ್ಪರ್ಧಾತ್ಮಕತೆಯನ್ನು ಇನ್ನಷ್ಟು ಹೆಚ್ಚಿಸಲು ಅರ್ಥಶಾಸ್ತ್ರಜ್ಞರು ಸಭೆಯಲ್ಲಿ ಸಲಹೆ ನೀಡಿದರು.</p>.<p class="bodytext">ಕುಟುಂಬಗಳ ಮಟ್ಟದಲ್ಲಿ ಉಳಿತಾಯ ಹೆಚ್ಚಿಸಿ, ಮೂಲಸೌಕರ್ಯ ಅಭಿವೃದ್ಧಿಪಡಿಸಿ, ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ರಾಚನಿಕ ಬದಲಾವಣೆಗಳನ್ನು ತರುವುದರ ಬಗ್ಗೆ ಸಭೆಯ ಚರ್ಚೆಗಳು ಗಮನ ನೀಡಿದವು.</p>.<p class="bodytext">ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿಗಳಾದ ಪಿ.ಕೆ. ಮಿಶ್ರಾ ಮತ್ತು ಶಕ್ತಿಕಾಂತ ದಾಸ್, ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೇರಿ ಮತ್ತಿತರರು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸಲು ಸುಧಾರಣೆಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದರು.</p>.<p>ಕೇಂದ್ರ ಬಜೆಟ್ಗೆ ಪೂರ್ವಭಾವಿಯಾಗಿ ಹಿರಿಯ ಅರ್ಥಶಾಸ್ತ್ರಜ್ಞರ ಜೊತೆ ಅವರು ಸಮಾಲೋಚನೆ ನಡೆಸಿದರು. ‘ಆತ್ಮನಿರ್ಭರತೆ ಮತ್ತು ರಾಚನಿಕ ಪರಿವರ್ತನೆ: ವಿಕಸಿತ ಭಾರತಕ್ಕೆ ಕಾರ್ಯಸೂಚಿ’ ಎಂಬ ವಿಷಯವಾಗಿ ಸಮಾಲೋಚನೆ ನಡೆಯಿತು.</p>.<p>ದೇಶವು ನೀತಿ ನಿರೂಪಣೆ ಸಂದರ್ಭದಲ್ಲಿ ಹಾಗೂ ಬಜೆಟ್ ರೂಪಿಸುವಾಗ 2047ರ ಗುರಿಗಳ ಮೇಲೆ ಗಮನ ಇರಿಸಿರಬೇಕು ಎಂದು ಅವರು ಒತ್ತಿಹೇಳಿದರು.</p>.<p class="bodytext">ತಯಾರಿಕೆ ಹಾಗೂ ಸೇವಾ ವಲಯಗಳ ಉತ್ಪಾದಕತೆ ಮತ್ತು ಸ್ಪರ್ಧಾತ್ಮಕತೆಯನ್ನು ಇನ್ನಷ್ಟು ಹೆಚ್ಚಿಸಲು ಅರ್ಥಶಾಸ್ತ್ರಜ್ಞರು ಸಭೆಯಲ್ಲಿ ಸಲಹೆ ನೀಡಿದರು.</p>.<p class="bodytext">ಕುಟುಂಬಗಳ ಮಟ್ಟದಲ್ಲಿ ಉಳಿತಾಯ ಹೆಚ್ಚಿಸಿ, ಮೂಲಸೌಕರ್ಯ ಅಭಿವೃದ್ಧಿಪಡಿಸಿ, ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ರಾಚನಿಕ ಬದಲಾವಣೆಗಳನ್ನು ತರುವುದರ ಬಗ್ಗೆ ಸಭೆಯ ಚರ್ಚೆಗಳು ಗಮನ ನೀಡಿದವು.</p>.<p class="bodytext">ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿಗಳಾದ ಪಿ.ಕೆ. ಮಿಶ್ರಾ ಮತ್ತು ಶಕ್ತಿಕಾಂತ ದಾಸ್, ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೇರಿ ಮತ್ತಿತರರು ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>