ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಶ್ರೀ, ವಚನ ಸಾಹಿತ್ಯ ಶ್ರೀ ಪ್ರಶಸ್ತಿಗೆ ಆಯ್ಕೆ

Last Updated 14 ಏಪ್ರಿಲ್ 2018, 20:08 IST
ಅಕ್ಷರ ಗಾತ್ರ

ಬೆಂಗಳೂರು: ‘ಬಸವಶ್ರೀ ಪ್ರಶಸ್ತಿ’ಗೆ ಪ್ರಭಾಕರ ಕೋರೆ, ‘ವಚನ ಸಾಹಿತ್ಯಶ್ರೀ ಪ್ರಶಸ್ತಿ’ಗೆ ಸರ್ವಮಂಗಳಾ ಶಂಕರ್‌ ಹಾಗೂ ಹೀ.ಚಿ. ಶಾಂತವೀರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಸವ ವೇದಿಕೆ ಅಧ್ಯಕ್ಷ ಸಿ. ಸೋಮಶೇಖರ ತಿಳಿಸಿದರು.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್‌ 18ರಂದು ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.

ಬಸವಶ್ರೀ ಪ್ರಶಸ್ತಿ ಪುರಸ್ಕೃತರಿಗೆ ಬಸವೇಶ್ವರ ಪುತ್ಥಳಿ ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರಿಗೆ ₹5 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಸೋಮಶೇಖರ ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT