2021ರ ಕೇಂದ್ರ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್, 'ಠೇವಣಿ ವಿಮೆ ಮತ್ತು ಸಾಲ ಖಾತರಿ ಕಾಯ್ದೆ (ಡಿಐಸಿಜಿಸಿ) 1961ಕ್ಕೆ ತಿದ್ದುಪಡಿ ತರುವ ಸಂಬಂಧ ಸರ್ಕಾರವು ಕಾರ್ಯೋನ್ಮುಖವಾಗಿದೆ. ತಿದ್ದುಪಡಿ ಅನುಮೋದನೆ ಬಳಿಕ ಠೇವಣಿದಾರರು ಅವರ ಹಣವನ್ನು ಸುಲಭವಾಗಿ ಮತ್ತು ನಿಗದಿತ ಸಮಯದೊಳಗೆ ಪಡೆಯಲು ಸಾಧ್ಯವಾಗಲಿದೆ' ಎಂದಿದ್ದರು.