<p><strong>ಬೆಂಗಳೂರು</strong>: ‘ಡಿಜಿಟಲ್ ವಹಿವಾಟು ನಡೆಸುವಾಗ ಗ್ರಾಹಕರು ಎಚ್ಚರಿಕೆಯಿಂದ ಇರಬೇಕು’ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ನ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಹೇಳಿದರು.</p>.<p>ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಚ್ 15ರವರೆಗೆ ಡಿಜಿಟಲ್ ಪಾವತಿ ಜಾಗೃತಿ ಸಪ್ತಾಹವನ್ನು ಆಯೋಜಿಸಿದೆ. ಈ ಅಭಿಯಾನದ ಭಾಗವಾಗಿ ಬ್ಯಾಂಕ್ ಹಮ್ಮಿಕೊಂಡಿರುವ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸಿನ್ಹಾ ಅವರು ಮಾತನಾಡಿದರು.</p>.<p>ಸುರಕ್ಷಿತವಾದ ಡಿಜಿಟಲ್ ಬ್ಯಾಂಕಿಂಗ್ ವಿಧಾನಗಳ ಬಗ್ಗೆ ಗ್ರಾಹಕರಿಗೆ ಶಿಕ್ಷಣ ನೀಡುವ ಅಗತ್ಯವಿದೆ. ಒಟಿಪಿಯನ್ನು ಹಂಚಿಕೊಳ್ಳಬಾರದು, ಅಪರಿಚಿತ ಲಿಂಕ್ಗಳನ್ನು ಒತ್ತಬಾರದು, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಸೈಬರ್ ವಂಚನೆಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಡಿಜಿಟಲ್ ವಂಚನೆ ತಡೆಗಟ್ಟುವಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಗೃತಿ ವಾಹನಕ್ಕೆ ಸಿನ್ಹಾ ಅವರು ಇದೇ ವೇಳೆ ಚಾಲನೆ ನೀಡಿದರು. ಈ ವಾಹನವು ಬೆಂಗಳೂರಿನಾದ್ಯಂತ ಸಂಚರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಡಿಜಿಟಲ್ ವಹಿವಾಟು ನಡೆಸುವಾಗ ಗ್ರಾಹಕರು ಎಚ್ಚರಿಕೆಯಿಂದ ಇರಬೇಕು’ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ನ ಬೆಂಗಳೂರು ವೃತ್ತದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಜೂಹಿ ಸ್ಮಿತಾ ಸಿನ್ಹಾ ಹೇಳಿದರು.</p>.<p>ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಚ್ 15ರವರೆಗೆ ಡಿಜಿಟಲ್ ಪಾವತಿ ಜಾಗೃತಿ ಸಪ್ತಾಹವನ್ನು ಆಯೋಜಿಸಿದೆ. ಈ ಅಭಿಯಾನದ ಭಾಗವಾಗಿ ಬ್ಯಾಂಕ್ ಹಮ್ಮಿಕೊಂಡಿರುವ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸಿನ್ಹಾ ಅವರು ಮಾತನಾಡಿದರು.</p>.<p>ಸುರಕ್ಷಿತವಾದ ಡಿಜಿಟಲ್ ಬ್ಯಾಂಕಿಂಗ್ ವಿಧಾನಗಳ ಬಗ್ಗೆ ಗ್ರಾಹಕರಿಗೆ ಶಿಕ್ಷಣ ನೀಡುವ ಅಗತ್ಯವಿದೆ. ಒಟಿಪಿಯನ್ನು ಹಂಚಿಕೊಳ್ಳಬಾರದು, ಅಪರಿಚಿತ ಲಿಂಕ್ಗಳನ್ನು ಒತ್ತಬಾರದು, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಮೂಲಕ ಸೈಬರ್ ವಂಚನೆಯಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಡಿಜಿಟಲ್ ವಂಚನೆ ತಡೆಗಟ್ಟುವಿಕೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಗೃತಿ ವಾಹನಕ್ಕೆ ಸಿನ್ಹಾ ಅವರು ಇದೇ ವೇಳೆ ಚಾಲನೆ ನೀಡಿದರು. ಈ ವಾಹನವು ಬೆಂಗಳೂರಿನಾದ್ಯಂತ ಸಂಚರಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>