<p><strong>ನವದೆಹಲಿ</strong> : ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ನಿಂದ ಮಾರ್ಚ್ 15ರ ವರೆಗೆ ₹21.26 ಲಕ್ಷ ಕೋಟಿ ನಿವ್ವಳ ನೇರ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು (ಸಿಬಿಡಿಟಿ) ಸೋಮವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.</p>.<p>2023–24ರ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಶೇ 13ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ.</p>.<p>ಈ ಆರ್ಥಿಕ ವರ್ಷದಲ್ಲಿ, ಸರ್ಕಾರವು ನಾಲ್ಕು ಕಂತುಗಳ ಮುಂಗಡ ತೆರಿಗೆಯಿಂದ ₹10.44 ಲಕ್ಷ ಕೋಟಿ ಸಂಗ್ರಹಿಸಿದೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ₹9.11 ಲಕ್ಷ ಕೋಟಿಗಳಷ್ಟಿತ್ತು. ಶೇ 14ರಷ್ಟು ಹೆಚ್ಚಳ ದಾಖಲಿಸಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮುಂಗಡ ತೆರಿಗೆ ಪಾವತಿಯ ಕೊನೆಯ ಕಂತು ಮಾರ್ಚ್ 15ರಂದು ಆಗಿತ್ತು.</p>.<p>ಕಾರ್ಪೊರೇಟ್ ತೆರಿಗೆ ₹7.57 ಲಕ್ಷ ಕೋಟಿ ಸಂಗ್ರಹವಾಗಿದ್ದು, ಒಟ್ಟಾರೆ ಶೇ 12ರಷ್ಟು ಹೆಚ್ಚಳವಾಗಿದೆ. ಕಾರ್ಪೊರೇಟ್ಯೇತರ ತೆರಿಗೆ ₹2.87 ಲಕ್ಷ ಕೋಟಿ ಸಂಗ್ರಹವಾಗಿದ್ದು, ಶೇ 20ರಷ್ಟು ಏರಿಕೆಯಾಗಿದೆ. ಷೇರು ವಹಿವಾಟು ತೆರಿಗೆ (ಎಸ್ಟಿಟಿ) ಸಂಗ್ರಹವು ಶೇ 56ರಷ್ಟು ಹೆಚ್ಚಾಗಿ, ₹53,095 ಕೋಟಿ ಸಂಗ್ರಹವಾಗಿದೆ. </p>.<p>ವೈಯಕ್ತಿಕ ಆದಾಯ ತೆರಿಗೆ ಸಂಗ್ರಹವು ಶೇ 17ರಷ್ಟು ಹೆಚ್ಚಾಗಿ ₹11.01 ಲಕ್ಷ ಕೋಟಿ ಆಗಿದೆ. ಒಟ್ಟು ₹4.60 ಲಕ್ಷ ಕೋಟಿ ಮರುಪಾವತಿ (ರೀಫಂಡ್) ಮಾಡಲಾಗಿದೆ. ಹಿಂದಿನ ಆರ್ಥಿಕ ವರ್ಷದಲ್ಲಿ ₹3.47 ಲಕ್ಷ ಕೋಟಿ ಮಾಡಲಾಗಿತ್ತು. ನೇರ ತೆರಿಗೆಯ ಸರಾಸರಿ ಸಂಗ್ರಹವು ₹25.86 ಲಕ್ಷ ಕೋಟಿ ಆಗಿದೆ ಎಂದು ತಿಳಿಸಿದೆ.</p>.<h2>ಐಬಿಸಿ: 28,818 ಅರ್ಜಿ ವಿಲೇವಾರಿ</h2><p><strong>ನವದೆಹಲಿ</strong> : ದಿವಾಳಿ ಸಂಹಿತೆ (ಐಬಿಸಿ) ಅಡಿಯಲ್ಲಿ 40,943 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ ₹10 ಲಕ್ಷ ಕೋಟಿ ಮೌಲ್ಯದ 28,818 ಅರ್ಜಿಗಳನ್ನು ವಿಚಾರಣೆಗೆ ಒಳಪಡುವ ಮೊದಲೇ ಬಗೆಹರಿಸಲಾಗಿದೆ ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಖಾತೆ ಸಚಿವ ಸಚಿವ ಹರ್ಷ ಮಲ್ಹೋತ್ರಾ ಲೋಕಸಭೆಗೆ ಸೋಮವಾರ ತಿಳಿಸಿದ್ದಾರೆ.</p><p>ವಿಶ್ವಬ್ಯಾಂಕ್ ವರದಿ ಪ್ರಕಾರ ದಿವಾಳಿತನವನ್ನು ಪರಿಹರಿಸುವಲ್ಲಿ ಭಾರತದ ಶ್ರೇಯಾಂಕ 2018ರಲ್ಲಿ 108 ಆಗಿತ್ತು. ಇದು 2019ರಲ್ಲಿ 52ನೇ ಸ್ಥಾನಕ್ಕೆ ಬಂದಿದೆ. ಇದು ದೊಡ್ಡ ಸಾಧನೆಯಾಗಿದೆ ಎಂದು ಹೇಳಿದ್ದಾರೆ.</p><p>ಅನುಕೂಲಕರ ವ್ಯಾಪಾರದ ವಾತಾವರಣ ಸೃಷ್ಟಿಸುವ ಗುರಿಯನ್ನು ಹೊಂದಿರುವ ಸುಲಲಿತ ಉದ್ದಿಮೆ ವಹಿವಾಟಿಗೆ (ಇಒಡಿಬಿ) ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. 2021ರ ಸೆಪ್ಟೆಂಬರ್ನಲ್ಲಿ ವಿಶ್ವಬ್ಯಾಂಕ್ ವ್ಯಾಪಾರ ವರದಿಯನ್ನು ಅನ್ನು ಪ್ರಕಟಿಸುವುದನ್ನು ನಿಲ್ಲಿಸಿತು. ಕೊನೆಯ ವರದಿ ಅಕ್ಟೋಬರ್ 2019ರಲ್ಲಿ ಬಿಡುಗಡೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong> : ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ನಿಂದ ಮಾರ್ಚ್ 15ರ ವರೆಗೆ ₹21.26 ಲಕ್ಷ ಕೋಟಿ ನಿವ್ವಳ ನೇರ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು (ಸಿಬಿಡಿಟಿ) ಸೋಮವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.</p>.<p>2023–24ರ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಶೇ 13ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ.</p>.<p>ಈ ಆರ್ಥಿಕ ವರ್ಷದಲ್ಲಿ, ಸರ್ಕಾರವು ನಾಲ್ಕು ಕಂತುಗಳ ಮುಂಗಡ ತೆರಿಗೆಯಿಂದ ₹10.44 ಲಕ್ಷ ಕೋಟಿ ಸಂಗ್ರಹಿಸಿದೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ₹9.11 ಲಕ್ಷ ಕೋಟಿಗಳಷ್ಟಿತ್ತು. ಶೇ 14ರಷ್ಟು ಹೆಚ್ಚಳ ದಾಖಲಿಸಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮುಂಗಡ ತೆರಿಗೆ ಪಾವತಿಯ ಕೊನೆಯ ಕಂತು ಮಾರ್ಚ್ 15ರಂದು ಆಗಿತ್ತು.</p>.<p>ಕಾರ್ಪೊರೇಟ್ ತೆರಿಗೆ ₹7.57 ಲಕ್ಷ ಕೋಟಿ ಸಂಗ್ರಹವಾಗಿದ್ದು, ಒಟ್ಟಾರೆ ಶೇ 12ರಷ್ಟು ಹೆಚ್ಚಳವಾಗಿದೆ. ಕಾರ್ಪೊರೇಟ್ಯೇತರ ತೆರಿಗೆ ₹2.87 ಲಕ್ಷ ಕೋಟಿ ಸಂಗ್ರಹವಾಗಿದ್ದು, ಶೇ 20ರಷ್ಟು ಏರಿಕೆಯಾಗಿದೆ. ಷೇರು ವಹಿವಾಟು ತೆರಿಗೆ (ಎಸ್ಟಿಟಿ) ಸಂಗ್ರಹವು ಶೇ 56ರಷ್ಟು ಹೆಚ್ಚಾಗಿ, ₹53,095 ಕೋಟಿ ಸಂಗ್ರಹವಾಗಿದೆ. </p>.<p>ವೈಯಕ್ತಿಕ ಆದಾಯ ತೆರಿಗೆ ಸಂಗ್ರಹವು ಶೇ 17ರಷ್ಟು ಹೆಚ್ಚಾಗಿ ₹11.01 ಲಕ್ಷ ಕೋಟಿ ಆಗಿದೆ. ಒಟ್ಟು ₹4.60 ಲಕ್ಷ ಕೋಟಿ ಮರುಪಾವತಿ (ರೀಫಂಡ್) ಮಾಡಲಾಗಿದೆ. ಹಿಂದಿನ ಆರ್ಥಿಕ ವರ್ಷದಲ್ಲಿ ₹3.47 ಲಕ್ಷ ಕೋಟಿ ಮಾಡಲಾಗಿತ್ತು. ನೇರ ತೆರಿಗೆಯ ಸರಾಸರಿ ಸಂಗ್ರಹವು ₹25.86 ಲಕ್ಷ ಕೋಟಿ ಆಗಿದೆ ಎಂದು ತಿಳಿಸಿದೆ.</p>.<h2>ಐಬಿಸಿ: 28,818 ಅರ್ಜಿ ವಿಲೇವಾರಿ</h2><p><strong>ನವದೆಹಲಿ</strong> : ದಿವಾಳಿ ಸಂಹಿತೆ (ಐಬಿಸಿ) ಅಡಿಯಲ್ಲಿ 40,943 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ ₹10 ಲಕ್ಷ ಕೋಟಿ ಮೌಲ್ಯದ 28,818 ಅರ್ಜಿಗಳನ್ನು ವಿಚಾರಣೆಗೆ ಒಳಪಡುವ ಮೊದಲೇ ಬಗೆಹರಿಸಲಾಗಿದೆ ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಖಾತೆ ಸಚಿವ ಸಚಿವ ಹರ್ಷ ಮಲ್ಹೋತ್ರಾ ಲೋಕಸಭೆಗೆ ಸೋಮವಾರ ತಿಳಿಸಿದ್ದಾರೆ.</p><p>ವಿಶ್ವಬ್ಯಾಂಕ್ ವರದಿ ಪ್ರಕಾರ ದಿವಾಳಿತನವನ್ನು ಪರಿಹರಿಸುವಲ್ಲಿ ಭಾರತದ ಶ್ರೇಯಾಂಕ 2018ರಲ್ಲಿ 108 ಆಗಿತ್ತು. ಇದು 2019ರಲ್ಲಿ 52ನೇ ಸ್ಥಾನಕ್ಕೆ ಬಂದಿದೆ. ಇದು ದೊಡ್ಡ ಸಾಧನೆಯಾಗಿದೆ ಎಂದು ಹೇಳಿದ್ದಾರೆ.</p><p>ಅನುಕೂಲಕರ ವ್ಯಾಪಾರದ ವಾತಾವರಣ ಸೃಷ್ಟಿಸುವ ಗುರಿಯನ್ನು ಹೊಂದಿರುವ ಸುಲಲಿತ ಉದ್ದಿಮೆ ವಹಿವಾಟಿಗೆ (ಇಒಡಿಬಿ) ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. 2021ರ ಸೆಪ್ಟೆಂಬರ್ನಲ್ಲಿ ವಿಶ್ವಬ್ಯಾಂಕ್ ವ್ಯಾಪಾರ ವರದಿಯನ್ನು ಅನ್ನು ಪ್ರಕಟಿಸುವುದನ್ನು ನಿಲ್ಲಿಸಿತು. ಕೊನೆಯ ವರದಿ ಅಕ್ಟೋಬರ್ 2019ರಲ್ಲಿ ಬಿಡುಗಡೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>