ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವಿನೋದ್ ಕುಮಾರ್ ಗುಪ್ತಾ, ‘ಕೋವಿಡ್ ಸಾಂಕ್ರಾಮಿಕವು ಆರ್ಥಿಕತೆಯ ಮೇಲೆ ಪರಿಣಾಮ ಉಂಟುಮಾಡಿದ್ದು, ನಾವು ನಮ್ಮ ನೌಕರರ ಸುರಕ್ಷತೆ ಮತ್ತು ದಕ್ಷತೆಯ ನಡುವೆ ಸರಿಯಾದ ಸಮತೋಲನ ಸಾಧಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮಿತಿಗಳ ಹೊರತಾಗಿಯೂ, ನಾವು ಅಡೆತಡೆಗಳನ್ನು ನಿವಾರಿಸಿದ್ದೇವೆ ಮತ್ತು ಬೇಡಿಕೆ-ಪೂರೈಕೆ ಅನುಪಾತವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ’ ಎಂದು ಹೇಳಿದರು.