ಆರ್ಬಿಐ ಗವರ್ನರ್ ಅವರೊಂದಿಗೆ ಸಿಐಐ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪಾರೇಖ್, ‘ಸಾಮರ್ಥ್ಯ ಇದ್ದರೂ ಸಾಲದ ಕಂತು ಮರುಪಾವತಿಸದೇ ಇರುವವರನ್ನು ನೋಡುತ್ತಿದ್ದೇವೆ. ಹೀಗಾಗಿ ಯೋಜನೆಯನ್ನು ಮುಂದುವರಿಸಬೇಡಿ’ ಎಂದು ಮನವಿ ಮಾಡಿದರು. ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಗವರ್ನರ್ ತಿಳಿಸಿದ್ದಾರೆ.