<p><strong>ನವದೆಹಲಿ:</strong> ‘ಕೆಲವು ಕಂಪನಿಗಳು ಅವಶ್ಯಕತೆ ಇಲ್ಲದಿದ್ದರೂ ಸಾಲ ಮರುಪಾವತಿ ಮುಂದೂಡಿಕೆ ಯೋಜನೆಯ ಲಾಭ ಪಡೆಯುತ್ತಿವೆ. ಹೀಗಾಗಿ ಅದನ್ನು ಮತ್ತೆ ವಿಸ್ತರಿಸಬಾರದು’ ಎಂದು ಎಚ್ಡಿಎಫ್ಸಿ ಲಿಮಿಟೆಡ್ನ ಅಧ್ಯಕ್ಷ ದೀಪಕ್ ಪಾರೇಖ್ ಅವರು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಮನವಿ ಮಾಡಿದ್ದಾರೆ.</p>.<p>‘ಈ ಯೋಜನೆಯು ಹಣಕಾಸು ವಲಯ, ಅದರಲ್ಲಿಯೂ ಮುಖ್ಯವಾಗಿ ಬ್ಯಾಂಕೇತರ ಹಣಕಾಸು ಕಂಪನಿಗಳ (ಎನ್ಬಿಎಫ್ಸಿ) ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ’ ಎಂದು ಅವರು ಹೇಳಿದ್ದಾರೆ. ಆರ್ಬಿಐ ನಿರ್ದೇಶನದಂತೆ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳು ಆಗಸ್ಟ್ 31ರವರೆಗೆ (ಆರು ತಿಂಗಳು) ಸಾಲ ಮರುಪಾವತಿ ಅವಧಿಯನ್ನು ಮುಂದೂಡಿವೆ.</p>.<p>ಕೋವಿಡ್–19 ಪರಿಣಾಮದಿಂದ ಉದ್ಯಮಗಳು ಹೊರಬಂದಿಲ್ಲ. ದೇಶದ ವಿವಿಧ ಭಾಗಗಳಲ್ಲಿ ಮತ್ತೆ ಲಾಕ್ಡೌನ್ ಜಾರಿಯಾಗಿದೆ. ಹೀಗಾಗಿ ಯೋಜನೆಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸುವಂತೆ ಬೇಡಿಕೆ ಬರುತ್ತಿದೆ.</p>.<p>ಆರ್ಬಿಐ ಗವರ್ನರ್ ಅವರೊಂದಿಗೆ ಸಿಐಐ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪಾರೇಖ್, ‘ಸಾಮರ್ಥ್ಯ ಇದ್ದರೂ ಸಾಲದ ಕಂತು ಮರುಪಾವತಿಸದೇ ಇರುವವರನ್ನು ನೋಡುತ್ತಿದ್ದೇವೆ. ಹೀಗಾಗಿ ಯೋಜನೆಯನ್ನು ಮುಂದುವರಿಸಬೇಡಿ’ ಎಂದು ಮನವಿ ಮಾಡಿದರು. ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಗವರ್ನರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೆಲವು ಕಂಪನಿಗಳು ಅವಶ್ಯಕತೆ ಇಲ್ಲದಿದ್ದರೂ ಸಾಲ ಮರುಪಾವತಿ ಮುಂದೂಡಿಕೆ ಯೋಜನೆಯ ಲಾಭ ಪಡೆಯುತ್ತಿವೆ. ಹೀಗಾಗಿ ಅದನ್ನು ಮತ್ತೆ ವಿಸ್ತರಿಸಬಾರದು’ ಎಂದು ಎಚ್ಡಿಎಫ್ಸಿ ಲಿಮಿಟೆಡ್ನ ಅಧ್ಯಕ್ಷ ದೀಪಕ್ ಪಾರೇಖ್ ಅವರು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಮನವಿ ಮಾಡಿದ್ದಾರೆ.</p>.<p>‘ಈ ಯೋಜನೆಯು ಹಣಕಾಸು ವಲಯ, ಅದರಲ್ಲಿಯೂ ಮುಖ್ಯವಾಗಿ ಬ್ಯಾಂಕೇತರ ಹಣಕಾಸು ಕಂಪನಿಗಳ (ಎನ್ಬಿಎಫ್ಸಿ) ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ’ ಎಂದು ಅವರು ಹೇಳಿದ್ದಾರೆ. ಆರ್ಬಿಐ ನಿರ್ದೇಶನದಂತೆ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳು ಆಗಸ್ಟ್ 31ರವರೆಗೆ (ಆರು ತಿಂಗಳು) ಸಾಲ ಮರುಪಾವತಿ ಅವಧಿಯನ್ನು ಮುಂದೂಡಿವೆ.</p>.<p>ಕೋವಿಡ್–19 ಪರಿಣಾಮದಿಂದ ಉದ್ಯಮಗಳು ಹೊರಬಂದಿಲ್ಲ. ದೇಶದ ವಿವಿಧ ಭಾಗಗಳಲ್ಲಿ ಮತ್ತೆ ಲಾಕ್ಡೌನ್ ಜಾರಿಯಾಗಿದೆ. ಹೀಗಾಗಿ ಯೋಜನೆಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸುವಂತೆ ಬೇಡಿಕೆ ಬರುತ್ತಿದೆ.</p>.<p>ಆರ್ಬಿಐ ಗವರ್ನರ್ ಅವರೊಂದಿಗೆ ಸಿಐಐ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪಾರೇಖ್, ‘ಸಾಮರ್ಥ್ಯ ಇದ್ದರೂ ಸಾಲದ ಕಂತು ಮರುಪಾವತಿಸದೇ ಇರುವವರನ್ನು ನೋಡುತ್ತಿದ್ದೇವೆ. ಹೀಗಾಗಿ ಯೋಜನೆಯನ್ನು ಮುಂದುವರಿಸಬೇಡಿ’ ಎಂದು ಮನವಿ ಮಾಡಿದರು. ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಗವರ್ನರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>