<p><strong>ನವದೆಹಲಿ:</strong> ‘ವಿತ್ತೀಯ ಶಿಸ್ತು ಕಾಯ್ದುಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಅಥವಾ ಇನ್ಯಾವುದೇ ಸಂಸ್ಥೆಯಿಂದ ಹೆಚ್ಚುವರಿ ನಿಧಿಯ ಅಗತ್ಯ ಸರ್ಕಾರಕ್ಕೆ ಇಲ್ಲ’ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.</p>.<p>‘ಇನ್ನು ಆರು ತಿಂಗಳವರೆಗೆ ಹಣ ನೀಡುವಂತೆಯೂ ಆರ್ಬಿಐ ಅನ್ನು ಕೇಳುವುದಿಲ್ಲ ಎಂದು ಟೈಮ್ಸ್ ನೌ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>‘ಪ್ರಸಕ್ತ ಹಣಕಾಸು ವರ್ಷದಲ್ಲಿವಿತ್ತೀಯ ಕೊರತೆಯನ್ನು ಶೇ 3.3ರಲ್ಲಿ ನಿಯಂತ್ರಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಆದರೆ,ಇದಕ್ಕಾಗಿ ಆರ್ಬಿಐ ಅಥವಾ ಯಾವುದೇ ಹಣಕಾಸು ಸಂಸ್ಥೆಯಿಂದ ಹೆಚ್ಚುವರಿ ಹಣ ಪಡೆಯುವ ಉದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p>‘ಕೇಂದ್ರ ಸರ್ಕಾರ ವಿತ್ತೀಯ ಕೊರತೆ ನಿಯಂತ್ರಿಸಲು ಆರ್ಬಿಐ ಬಳಿ ಇರುವ ಹೆಚ್ಚುವರಿ ಮೀಸಲು ಸಂಗ್ರಹವನ್ನು ಬಳಸಿಕೊಳ್ಳಲು ಮುಂದಾಗಿದೆ ಎನ್ನುವ ಟೀಕೆಗಳಿಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ಜಾಗತಿಕ ಮಟ್ಟದಲ್ಲಿ ಕೇಂದ್ರೀಯ ಬ್ಯಾಂಕ್ಗಳು ಯಾವ ಪ್ರಮಾಣದಲ್ಲಿ ಮೀಸಲು ಹೊಂದಬಹುದು ಎನ್ನುವುದಕ್ಕೆ ರೂಪುರೇಷೆ ಹೊಂದಿವೆ. ಅಂತೆಯೇ ಆರ್ಬಿಐನಮೀಸಲು ನಿಧಿಯ ಸೂಕ್ತ ಪ್ರಮಾಣ ನಿರ್ಧಾರವಾಗಬೇಕು ಎಂದು ನಾವುಬಯಸುತ್ತಿದ್ದೇವೆ.</p>.<p>‘ಆರ್ಬಿಐನ ಹೊಸ ಬಂಡವಾಳ ನೀತಿಯಿಂದ ಬರುವ ಹೆಚ್ಚುವರಿ ನಿಧಿಯನ್ನು ಯಾವಾಗಲೂ ಬಡತನ ನಿರ್ಮೂಲನೆ ಕಾರ್ಯಕ್ರಮಕ್ಕೆ<br />ಬಳಸಲಾಗುತ್ತಿದೆ.</p>.<p>‘ಕಾನೂನಿನ ಚೌಕಟ್ಟಿನಡಿ ಆರ್ಬಿಐನ ಸ್ವಾಯತ್ತೆಯನ್ನು ಗೌರವಿಸಲಾಗುವುದು. ಕೆಲವು ವಲಯಗಳು ನಗದು ಕೊರತೆ ಸಮಸ್ಯೆ ಎದುರಿಸಿದರೆ ಅದನ್ನು ಬಗೆಹರಿಸುವಂತೆ ಆರ್ಬಿಐ ಅನ್ನು ಕೇಳುತ್ತೇವೆ. ಏಕೆಂದರೆ ಕೆಲವು ವಿಷಯಗಳನ್ನು ನಿರ್ಧರಿಸುವ ಅಧಿಕಾರವನ್ನು ಆರ್ಬಿಐ ಹೊಂದಿದೆ’ ಎಂದು ಸಚಿವ ಜೇಟ್ಲಿ ಪ್ರತಿಕ್ರಿಯಿಸಿದ್ದಾರೆ.</p>.<p>ಆರ್ಬಿಐನ ಮೀಸಲುನಿಧಿಯ ಸೂಕ್ತ ಪ್ರಮಾಣ ನಿರ್ಧರಿಸಲು ನಿರ್ದೇಶಕ ಮಂಡಳಿ ರಚಿಸಲು ಉದ್ದೇಶಿಸಿರುವ ಪರಿಣತರ ಸಮಿತಿ ಶೀಘ್ರದಲ್ಲಿಯೇ ಅಸ್ತಿತ್ವಕ್ಕೆ ಬರಲಿದೆ.</p>.<p>ಸಮಿತಿಯು ಯಾವ ವಿಷಯಗಳ ಬಗ್ಗೆ ವರದಿ ನೀಡಬೇಕು ಮತ್ತು ಸಮಿತಿಗೆ ಯಾರನ್ನು ನೇಮಕ ಮಾಡಬೇಕು ಎನ್ನುವುದನ್ನು ಕೇಂದ್ರ ಸರ್ಕಾರ ಮತ್ತುಆರ್ಬಿಐಜಂಟಿಯಾಗಿಯೇ ನಿರ್ಧರಿಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ವಿತ್ತೀಯ ಶಿಸ್ತು ಕಾಯ್ದುಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಅಥವಾ ಇನ್ಯಾವುದೇ ಸಂಸ್ಥೆಯಿಂದ ಹೆಚ್ಚುವರಿ ನಿಧಿಯ ಅಗತ್ಯ ಸರ್ಕಾರಕ್ಕೆ ಇಲ್ಲ’ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.</p>.<p>‘ಇನ್ನು ಆರು ತಿಂಗಳವರೆಗೆ ಹಣ ನೀಡುವಂತೆಯೂ ಆರ್ಬಿಐ ಅನ್ನು ಕೇಳುವುದಿಲ್ಲ ಎಂದು ಟೈಮ್ಸ್ ನೌ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.</p>.<p>‘ಪ್ರಸಕ್ತ ಹಣಕಾಸು ವರ್ಷದಲ್ಲಿವಿತ್ತೀಯ ಕೊರತೆಯನ್ನು ಶೇ 3.3ರಲ್ಲಿ ನಿಯಂತ್ರಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಆದರೆ,ಇದಕ್ಕಾಗಿ ಆರ್ಬಿಐ ಅಥವಾ ಯಾವುದೇ ಹಣಕಾಸು ಸಂಸ್ಥೆಯಿಂದ ಹೆಚ್ಚುವರಿ ಹಣ ಪಡೆಯುವ ಉದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p>‘ಕೇಂದ್ರ ಸರ್ಕಾರ ವಿತ್ತೀಯ ಕೊರತೆ ನಿಯಂತ್ರಿಸಲು ಆರ್ಬಿಐ ಬಳಿ ಇರುವ ಹೆಚ್ಚುವರಿ ಮೀಸಲು ಸಂಗ್ರಹವನ್ನು ಬಳಸಿಕೊಳ್ಳಲು ಮುಂದಾಗಿದೆ ಎನ್ನುವ ಟೀಕೆಗಳಿಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ಜಾಗತಿಕ ಮಟ್ಟದಲ್ಲಿ ಕೇಂದ್ರೀಯ ಬ್ಯಾಂಕ್ಗಳು ಯಾವ ಪ್ರಮಾಣದಲ್ಲಿ ಮೀಸಲು ಹೊಂದಬಹುದು ಎನ್ನುವುದಕ್ಕೆ ರೂಪುರೇಷೆ ಹೊಂದಿವೆ. ಅಂತೆಯೇ ಆರ್ಬಿಐನಮೀಸಲು ನಿಧಿಯ ಸೂಕ್ತ ಪ್ರಮಾಣ ನಿರ್ಧಾರವಾಗಬೇಕು ಎಂದು ನಾವುಬಯಸುತ್ತಿದ್ದೇವೆ.</p>.<p>‘ಆರ್ಬಿಐನ ಹೊಸ ಬಂಡವಾಳ ನೀತಿಯಿಂದ ಬರುವ ಹೆಚ್ಚುವರಿ ನಿಧಿಯನ್ನು ಯಾವಾಗಲೂ ಬಡತನ ನಿರ್ಮೂಲನೆ ಕಾರ್ಯಕ್ರಮಕ್ಕೆ<br />ಬಳಸಲಾಗುತ್ತಿದೆ.</p>.<p>‘ಕಾನೂನಿನ ಚೌಕಟ್ಟಿನಡಿ ಆರ್ಬಿಐನ ಸ್ವಾಯತ್ತೆಯನ್ನು ಗೌರವಿಸಲಾಗುವುದು. ಕೆಲವು ವಲಯಗಳು ನಗದು ಕೊರತೆ ಸಮಸ್ಯೆ ಎದುರಿಸಿದರೆ ಅದನ್ನು ಬಗೆಹರಿಸುವಂತೆ ಆರ್ಬಿಐ ಅನ್ನು ಕೇಳುತ್ತೇವೆ. ಏಕೆಂದರೆ ಕೆಲವು ವಿಷಯಗಳನ್ನು ನಿರ್ಧರಿಸುವ ಅಧಿಕಾರವನ್ನು ಆರ್ಬಿಐ ಹೊಂದಿದೆ’ ಎಂದು ಸಚಿವ ಜೇಟ್ಲಿ ಪ್ರತಿಕ್ರಿಯಿಸಿದ್ದಾರೆ.</p>.<p>ಆರ್ಬಿಐನ ಮೀಸಲುನಿಧಿಯ ಸೂಕ್ತ ಪ್ರಮಾಣ ನಿರ್ಧರಿಸಲು ನಿರ್ದೇಶಕ ಮಂಡಳಿ ರಚಿಸಲು ಉದ್ದೇಶಿಸಿರುವ ಪರಿಣತರ ಸಮಿತಿ ಶೀಘ್ರದಲ್ಲಿಯೇ ಅಸ್ತಿತ್ವಕ್ಕೆ ಬರಲಿದೆ.</p>.<p>ಸಮಿತಿಯು ಯಾವ ವಿಷಯಗಳ ಬಗ್ಗೆ ವರದಿ ನೀಡಬೇಕು ಮತ್ತು ಸಮಿತಿಗೆ ಯಾರನ್ನು ನೇಮಕ ಮಾಡಬೇಕು ಎನ್ನುವುದನ್ನು ಕೇಂದ್ರ ಸರ್ಕಾರ ಮತ್ತುಆರ್ಬಿಐಜಂಟಿಯಾಗಿಯೇ ನಿರ್ಧರಿಸಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>