ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಚೇತರಿಕೆ ಕಾಣಲು ವರ್ಷಕ್ಕೂ ಹೆಚ್ಚು ಅವಧಿ ಬೇಕು: ಸಮೀಕ್ಷೆ

ಭಾರತೀಯ ಕೈಗಾರಿಕಾ ಒಕ್ಕೂಟ
Last Updated 4 ಮೇ 2020, 4:28 IST
ಅಕ್ಷರ ಗಾತ್ರ

ನವದೆಹಲಿ: ದೇಶಿ ಅರ್ಥ ವ್ಯವಸ್ಥೆಯಲ್ಲಿ ಸಹಜ ಸ್ಥಿತಿ ನಿರ್ಮಾಣವಾಗಲು ಒಂದು ವರ್ಷಕ್ಕೂ ಹೆಚ್ಚು ಅವಧಿ ಬೇಕಾಗಬಹುದು ಎಂದು ಕಾರ್ಪೊರೇಟ್‌ಗಳ ಮುಖ್ಯಸ್ಥರು ಅಂದಾಜಿಸಿದ್ದಾರೆ.

ಆರ್ಥಿಕ ದಿಗ್ಬಂಧನ ಕೊನೆಗೊಂಡ ನಂತರದ ದಿನಗಳಲ್ಲಿ ಮಂದಗತಿಯ ಆರ್ಥಿಕ ಪ್ರಗತಿಯು ದೀರ್ಘ ಸಮಯದವರೆಗೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ್ದ 300ಕ್ಕೂ ಹೆಚ್ಚು ಸಿಇಒಗಳು ಅಭಿಪ್ರಾಯಪಟ್ಟಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಎರಡು ಮೂರಾಂಶದಷ್ಟು ಸಿಇಒಗಳು ಕಿರು, ಸಣ್ಣ ಮತ್ತು ಮಧ್ಯಮ (ಎಂಎಸ್ಎಂಇ) ಕೈಗಾರಿಕೆಗಳಿಗೆ ಸೇರಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ಈ ಸಮೀಕ್ಷೆ ನಡೆಸಿದೆ.

ಮಾರ್ಚ್‌ 25 ರಿಂದ ದೇಶದಾದ್ಯಂತ ಜಾರಿಗೆ ಬಂದಿರುವ ದಿಗ್ಬಂಧನವು ಆರ್ಥಿಕ ಚಟುವಟಿಕೆಗಳಿಗೆ ಭಾರಿ ಪೆಟ್ಟು ನೀಡಿದ್ದು, ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳಲಿರುವುದು ಸಮೀಕ್ಷೆಯಲ್ಲಿ ದೃಢಪಟ್ಟಿದೆ.

ಸಂಪೂರ್ಣ ದಿಗ್ಬಂಧನ ಮತ್ತು ಉತ್ಪನ್ನಗಳಿಗೆ ಬೇಡಿಕೆಯೇ ಇಲ್ಲದಿರುವುದರಿಂದ ಉದ್ದಿಮೆಗಳ ವಹಿವಾಟಿಗೆ ತೀವ್ರ ಅಡಚಣೆ ಒಡ್ಡಿದೆ ಎಂದು ಪ್ರತಿ ನಾಲ್ಕು ಕಂಪನಿಗಳ ಪೈಕಿ ಮೂರು ಕಂಪನಿಗಳು ಹೇಳಿಕೊಂಡಿವೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್‌–ಜೂನ್‌) ವರಮಾನವು ಶೇ 40ರಷ್ಟು ಕಡಿಮೆಯಾಗಲಿದೆ ಎಂದು ಉದ್ದಿಮೆಗಳು ನಿರೀಕ್ಷಿಸಿವೆ.

ಉದ್ಯೋಗ ನಷ್ಟ: ಆರ್ಥಿಕತೆಯಲ್ಲಿ ಶೇ 15 ರಿಂದ ಶೇ 30ರಷ್ಟು ಉದ್ಯೋಗ ನಷ್ಟವಾಗಲಿದೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಅರ್ಧಕ್ಕೂ ಹೆಚ್ಚು ಕಂಪನಿಗಳು ಎಣಿಕೆ ಹಾಕಿವೆ.

ಕೋವಿಡ್‌ ಬಿಕ್ಕಟ್ಟಿನಿಂದಾಗಿ ತಮ್ಮ ವೇತನ ಕಡಿತವಾಗಿಲ್ಲ ಎಂದು ಎರಡು ಮೂರಾಂಶದಷ್ಟು ಸಿಇಒಗಳು ಹೇಳಿಕೊಂಡಿದ್ದಾರೆ.

‘ಅರ್ಥ ವ್ಯವಸ್ಥೆಯ ಚೇತರಿಕೆಗೆ ಉದ್ದಿಮೆ ವಲಯವು ಉತ್ತೇಜನಾ ಕೊಡುಗೆಯ ನಿರೀಕ್ಷೆಯಲ್ಲಿ ಇದೆ. ದಿಗ್ಬಂಧನದಿಂದ ಆರ್ಥಿಕತೆಯನ್ನು ಹಂತ ಹಂತವಾಗಿ ಮುಕ್ತಗೊಳಿಸುವ ಅಗತ್ಯವೂ ಇದೆ’ ಎದು ಸಿಐಐ ಮಹಾ ನಿರ್ದೇಶಕ ಚಂದ್ರಜಿತ್‌ ಬ್ಯಾನರ್ಜಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT