<p><strong>ನವದೆಹಲಿ:</strong>ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಅವರ ಮುಂಬೈ ನಿವಾಸದಲ್ಲಿ ಶುಕ್ರವಾರ ರಾತ್ರಿ ಶೋಧ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶನಿವಾರವೂ ದೆಹಲಿ ಮತ್ತು ಮುಂಬೈನ ಕೆಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದರು.</p>.<p>ಶನಿವಾರ ಅವರನ್ನು ಇ.ಡಿಯ ಕಚೇರಿಗೆ ಕರೆತಂದು ಏಳು ಗಂಟೆಗಳವರೆಗೆ ವಿಚಾರಣೆಗೆ ಒಳಪಡಿಸಿ ಅವರ ಹೇಳಿಕೆಗಳನ್ನು ದಾಖಲಿಸಿ<br />ಕೊಂಡಿದ್ದಾರೆ.</p>.<p>ರಾಣಾ ಅವರ ಪುತ್ರಿಯರಾದ ರಾಖೀ ಕಪೂರ್ ಟಂಡನ್, ರೋಶ್ನಿ ಕಪೂರ್ ಮತ್ತು ರಾಧಾ ಕಪೂರ್ ಅವರಿಗೆ ಸೇರಿರುವ ಮನೆಗಳಲ್ಲಿಯೂ ಶೋಧ ಕಾರ್ಯ ನಡೆಸಲಾಯಿತು.</p>.<p>ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್ಎ) ಹೆಚ್ಚಿನ ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ಒಕ್ಕೂಟ ಆಗ್ರಹ:</strong>ಖಾಸಗಿ ವಲಯದ ಬ್ಯಾಂಕ್ಗಳು ಒಂದೊಂದಾಗಿ ವೈಫಲ್ಯ ಅನುಭವಿಸುತ್ತಿವೆ. ಹೀಗಾಗಿ ಖಾಸಗಿ ಬ್ಯಾಂಕ್ಗಳನ್ನು ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಳ್ಳುವಂತೆ ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿ ಒಕ್ಕೂಟ (ಎಐಬಿಇಎ) ಆಗ್ರಹಿಸಿದೆ.</p>.<p>ಕಷ್ಟಪಟ್ಟು ಉಳಿಸಿದ ಹಣವನ್ನು ಬ್ಯಾಂಕ್ನಲ್ಲಿ ಠೇವಣಿಯಾಗಿ ಇಡಲಾಗುತ್ತದೆ. ಅದನ್ನು ಬ್ಯಾಂಕ್ಗಳು ಸಮರ್ಪಕವಾಗಿ ನಿರ್ವಹಿಸದೇ ಇದ್ದರೆ ಅದಕ್ಕೆ ಕಾರಣರಾದ ಉನ್ನತ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಬೇಕು ಎಂದು ಹೇಳಿದೆ. ಗ್ರಾಹಕರು ಖಾತೆಯಿಂದ ಹಣ ಪಡೆಯಲು ಶನಿವಾರವೂ ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಅವರ ಮುಂಬೈ ನಿವಾಸದಲ್ಲಿ ಶುಕ್ರವಾರ ರಾತ್ರಿ ಶೋಧ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶನಿವಾರವೂ ದೆಹಲಿ ಮತ್ತು ಮುಂಬೈನ ಕೆಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದರು.</p>.<p>ಶನಿವಾರ ಅವರನ್ನು ಇ.ಡಿಯ ಕಚೇರಿಗೆ ಕರೆತಂದು ಏಳು ಗಂಟೆಗಳವರೆಗೆ ವಿಚಾರಣೆಗೆ ಒಳಪಡಿಸಿ ಅವರ ಹೇಳಿಕೆಗಳನ್ನು ದಾಖಲಿಸಿ<br />ಕೊಂಡಿದ್ದಾರೆ.</p>.<p>ರಾಣಾ ಅವರ ಪುತ್ರಿಯರಾದ ರಾಖೀ ಕಪೂರ್ ಟಂಡನ್, ರೋಶ್ನಿ ಕಪೂರ್ ಮತ್ತು ರಾಧಾ ಕಪೂರ್ ಅವರಿಗೆ ಸೇರಿರುವ ಮನೆಗಳಲ್ಲಿಯೂ ಶೋಧ ಕಾರ್ಯ ನಡೆಸಲಾಯಿತು.</p>.<p>ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್ಎ) ಹೆಚ್ಚಿನ ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p><strong>ಒಕ್ಕೂಟ ಆಗ್ರಹ:</strong>ಖಾಸಗಿ ವಲಯದ ಬ್ಯಾಂಕ್ಗಳು ಒಂದೊಂದಾಗಿ ವೈಫಲ್ಯ ಅನುಭವಿಸುತ್ತಿವೆ. ಹೀಗಾಗಿ ಖಾಸಗಿ ಬ್ಯಾಂಕ್ಗಳನ್ನು ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಳ್ಳುವಂತೆ ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿ ಒಕ್ಕೂಟ (ಎಐಬಿಇಎ) ಆಗ್ರಹಿಸಿದೆ.</p>.<p>ಕಷ್ಟಪಟ್ಟು ಉಳಿಸಿದ ಹಣವನ್ನು ಬ್ಯಾಂಕ್ನಲ್ಲಿ ಠೇವಣಿಯಾಗಿ ಇಡಲಾಗುತ್ತದೆ. ಅದನ್ನು ಬ್ಯಾಂಕ್ಗಳು ಸಮರ್ಪಕವಾಗಿ ನಿರ್ವಹಿಸದೇ ಇದ್ದರೆ ಅದಕ್ಕೆ ಕಾರಣರಾದ ಉನ್ನತ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಬೇಕು ಎಂದು ಹೇಳಿದೆ. ಗ್ರಾಹಕರು ಖಾತೆಯಿಂದ ಹಣ ಪಡೆಯಲು ಶನಿವಾರವೂ ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>