<p><strong>ನವದೆಹಲಿ</strong>: ಕೊಬ್ಬರಿ ಎಣ್ಣೆಯ ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರವು ಕೊಬ್ಬರಿ ಎಣ್ಣೆ (ತೆಂಗಿನೆಣ್ಣೆ) ಮತ್ತು ಕೊಬ್ಬರಿ ಆಮದಿಗೆ ಅನುಮತಿ ನೀಡಬೇಕು ಎಂದು ಭಾರತದ ಎಣ್ಣೆ ಗಿರಣಿ ಮಾಲೀಕರ ಸಂಘ (ಎಸ್ಇಎ) ಶುಕ್ರವಾರ ಒತ್ತಾಯಿಸಿದೆ. </p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕೊಬ್ಬರಿ ಎಣ್ಣೆ ಬೆಲೆಯು ಮೂರು ಪಟ್ಟು ಹೆಚ್ಚಳವಾಗಿದೆ. ಹೀಗಾಗಿ ಗ್ರಾಹಕರ ಹಿತದೃಷ್ಟಿಯಿಂದ 6 ತಿಂಗಳಿನಿಂದ 12 ತಿಂಗಳವರೆಗೆ ಇದರ ಆಮದಿಗೆ ತಕ್ಷಣವೇ ಅನುಮತಿ ನೀಡಬೇಕು ಎಂದು ಹೇಳಿದೆ. </p>.<p>ಕಳೆದ ವರ್ಷ ಸಗಟು ಮಾರುಕಟ್ಟೆಯಲ್ಲಿ ಕೆ.ಜಿ ಕೊಬ್ಬರಿ ಎಣ್ಣೆ ದರ ಸುಮಾರು ₹130 ಇತ್ತು. ಅದು ಪ್ರಸ್ತುತ ₹400 ದಾಟಿದೆ. ಇದರಿಂದ ಗ್ರಾಹಕರು ತಾಳೆ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಖರೀದಿಸುವಂತಾಗಿದೆ.</p>.<p>ಕೀಟಗಳ ದಾಳಿಯಿಂದಾಗಿ ಕಳೆದ ಎರಡು ವರ್ಷಗಳಿಂದ ಕೊಬ್ಬರಿ ಉತ್ಪಾದನೆಯಲ್ಲಿ ಶೇ 40ರಷ್ಟು ಇಳಿಕೆಯಾಗಿದೆ. ಇದೇ ರೀತಿ ದರ ಹೆಚ್ಚಳವಾದರೆ ಕೊಬ್ಬರಿ ಎಣ್ಣೆ ಖರೀದಿಯಿಂದ ಗ್ರಾಹಕರು ಹಿಂದೆ ಸರಿದು ಇತರೆ ಅಡುಗೆ ಎಣ್ಣೆ ಖರೀದಿಗೆ ಮುಂದಾಗಲಿದ್ದಾರೆ. ಇದು ಈ ಎಣ್ಣೆಗಳ ಬೆಲೆಯ ಮೇಲೆ ಪರಿಣಾಮ ಬೀರಲಿದೆ ಮತ್ತು ಆಮದು ಅವಲಂಬನೆಯನ್ನು ಹೆಚ್ಚಿಸಲಿದೆ ಎಂದು ತಿಳಿಸಿದೆ. </p>.<p>ಕೊಬ್ಬರಿ ಮತ್ತು ಕೊಬ್ಬರಿ ಎಣ್ಣೆಯ ಆಮದಿನಿಂದ ಬೆಳೆಗಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬೆಲೆಯನ್ನು ಸ್ಥಿರಗೊಳಿಸುತ್ತದೆ ಎಂದು ಹೇಳಿದೆ.</p>.<p>ಕೇರಳವು ಕೊಬ್ಬರಿ ಎಣ್ಣೆಯ ಪ್ರಮುಖ ಮಾರುಕಟ್ಟೆಯಾಗಿದ್ದು, ಬೆಲೆ ಏರಿಕೆಯಿಂದ ಕೊಬ್ಬರಿ ಎಣ್ಣೆಯಿಂದ ದೂರ ಸರಿಯುತ್ತಿದೆ. ದರ ಹೆಚ್ಚಳದಿಂದ ಕಲಬೆರಕೆ ಹೆಚ್ಚುತ್ತಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೊಬ್ಬರಿ ಎಣ್ಣೆಯ ಬೆಲೆ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರವು ಕೊಬ್ಬರಿ ಎಣ್ಣೆ (ತೆಂಗಿನೆಣ್ಣೆ) ಮತ್ತು ಕೊಬ್ಬರಿ ಆಮದಿಗೆ ಅನುಮತಿ ನೀಡಬೇಕು ಎಂದು ಭಾರತದ ಎಣ್ಣೆ ಗಿರಣಿ ಮಾಲೀಕರ ಸಂಘ (ಎಸ್ಇಎ) ಶುಕ್ರವಾರ ಒತ್ತಾಯಿಸಿದೆ. </p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕೊಬ್ಬರಿ ಎಣ್ಣೆ ಬೆಲೆಯು ಮೂರು ಪಟ್ಟು ಹೆಚ್ಚಳವಾಗಿದೆ. ಹೀಗಾಗಿ ಗ್ರಾಹಕರ ಹಿತದೃಷ್ಟಿಯಿಂದ 6 ತಿಂಗಳಿನಿಂದ 12 ತಿಂಗಳವರೆಗೆ ಇದರ ಆಮದಿಗೆ ತಕ್ಷಣವೇ ಅನುಮತಿ ನೀಡಬೇಕು ಎಂದು ಹೇಳಿದೆ. </p>.<p>ಕಳೆದ ವರ್ಷ ಸಗಟು ಮಾರುಕಟ್ಟೆಯಲ್ಲಿ ಕೆ.ಜಿ ಕೊಬ್ಬರಿ ಎಣ್ಣೆ ದರ ಸುಮಾರು ₹130 ಇತ್ತು. ಅದು ಪ್ರಸ್ತುತ ₹400 ದಾಟಿದೆ. ಇದರಿಂದ ಗ್ರಾಹಕರು ತಾಳೆ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಖರೀದಿಸುವಂತಾಗಿದೆ.</p>.<p>ಕೀಟಗಳ ದಾಳಿಯಿಂದಾಗಿ ಕಳೆದ ಎರಡು ವರ್ಷಗಳಿಂದ ಕೊಬ್ಬರಿ ಉತ್ಪಾದನೆಯಲ್ಲಿ ಶೇ 40ರಷ್ಟು ಇಳಿಕೆಯಾಗಿದೆ. ಇದೇ ರೀತಿ ದರ ಹೆಚ್ಚಳವಾದರೆ ಕೊಬ್ಬರಿ ಎಣ್ಣೆ ಖರೀದಿಯಿಂದ ಗ್ರಾಹಕರು ಹಿಂದೆ ಸರಿದು ಇತರೆ ಅಡುಗೆ ಎಣ್ಣೆ ಖರೀದಿಗೆ ಮುಂದಾಗಲಿದ್ದಾರೆ. ಇದು ಈ ಎಣ್ಣೆಗಳ ಬೆಲೆಯ ಮೇಲೆ ಪರಿಣಾಮ ಬೀರಲಿದೆ ಮತ್ತು ಆಮದು ಅವಲಂಬನೆಯನ್ನು ಹೆಚ್ಚಿಸಲಿದೆ ಎಂದು ತಿಳಿಸಿದೆ. </p>.<p>ಕೊಬ್ಬರಿ ಮತ್ತು ಕೊಬ್ಬರಿ ಎಣ್ಣೆಯ ಆಮದಿನಿಂದ ಬೆಳೆಗಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬೆಲೆಯನ್ನು ಸ್ಥಿರಗೊಳಿಸುತ್ತದೆ ಎಂದು ಹೇಳಿದೆ.</p>.<p>ಕೇರಳವು ಕೊಬ್ಬರಿ ಎಣ್ಣೆಯ ಪ್ರಮುಖ ಮಾರುಕಟ್ಟೆಯಾಗಿದ್ದು, ಬೆಲೆ ಏರಿಕೆಯಿಂದ ಕೊಬ್ಬರಿ ಎಣ್ಣೆಯಿಂದ ದೂರ ಸರಿಯುತ್ತಿದೆ. ದರ ಹೆಚ್ಚಳದಿಂದ ಕಲಬೆರಕೆ ಹೆಚ್ಚುತ್ತಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>