<p><strong>ನವದೆಹಲಿ</strong>: ಚುನಾವಣಾ ಆಯೋಗದ ಒಪ್ಪಿಗೆ ಪಡೆದ ಬಳಿಕವೇ ಕೇಂದ್ರ ಸರ್ಕಾರವು ಈರುಳ್ಳಿ ರಫ್ತಿನ ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂಪಡೆದಿದೆ ಎಂದು ಮೂಲಗಳು ತಿಳಿಸಿವೆ.</p>.<p>ದೇಶೀಯ ಮಾರುಕಟ್ಟೆಯಲ್ಲಿನ ಬೇಡಿಕೆ ಮತ್ತು ಬೆಲೆ ನಿಯಂತ್ರಿಸಲು ಕೇಂದ್ರವು ಈರುಳ್ಳಿ ರಫ್ತಿಗೆ ಕಳೆದ ವರ್ಷದ ಡಿಸೆಂಬರ್ 8ರಂದು ನಿಷೇಧ ವಿಧಿಸಿತ್ತು. ಈಗ ಲೋಕಸಭಾ ಚುನಾವಣೆಯಲ್ಲಿ ರೈತರ ಮತ ಸೆಳೆಯಲು ಈ ಆದೇಶವನ್ನು ವಾಪಸ್ ಪಡೆದಿದೆ ಎಂದು ಹೇಳಲಾಗಿತ್ತು.</p>.<p>ಸದ್ಯ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದೆ. ಹಾಗಾಗಿ, ಕೇಂದ್ರ ಹಣಕಾಸು ಸಚಿವಾಲಯವು ಆಯೋಗದ ಅನುಮತಿ ಪಡೆದ ಬಳಿಕವೇ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.</p>.<p>ರಾಬಿ ಅವಧಿಯಲ್ಲಿ ಉತ್ಪಾದನೆಯ ಅಂದಾಜು ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಆಧಾರದ ಮೇಲೆ ರಫ್ತು ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ಹೇಳಿದೆ.</p>.<p>ಕನಿಷ್ಠ ರಫ್ತು ದರವನ್ನು ಪ್ರತಿ ಕೆ.ಜಿಗೆ ₹46 ನಿಗದಿಪಡಿಸಿದೆ. ಅಲ್ಲದೆ, ಶೇ 40ರಷ್ಟು ರಫ್ತು ಸುಂಕವನ್ನೂ ವಿಧಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚುನಾವಣಾ ಆಯೋಗದ ಒಪ್ಪಿಗೆ ಪಡೆದ ಬಳಿಕವೇ ಕೇಂದ್ರ ಸರ್ಕಾರವು ಈರುಳ್ಳಿ ರಫ್ತಿನ ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂಪಡೆದಿದೆ ಎಂದು ಮೂಲಗಳು ತಿಳಿಸಿವೆ.</p>.<p>ದೇಶೀಯ ಮಾರುಕಟ್ಟೆಯಲ್ಲಿನ ಬೇಡಿಕೆ ಮತ್ತು ಬೆಲೆ ನಿಯಂತ್ರಿಸಲು ಕೇಂದ್ರವು ಈರುಳ್ಳಿ ರಫ್ತಿಗೆ ಕಳೆದ ವರ್ಷದ ಡಿಸೆಂಬರ್ 8ರಂದು ನಿಷೇಧ ವಿಧಿಸಿತ್ತು. ಈಗ ಲೋಕಸಭಾ ಚುನಾವಣೆಯಲ್ಲಿ ರೈತರ ಮತ ಸೆಳೆಯಲು ಈ ಆದೇಶವನ್ನು ವಾಪಸ್ ಪಡೆದಿದೆ ಎಂದು ಹೇಳಲಾಗಿತ್ತು.</p>.<p>ಸದ್ಯ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದೆ. ಹಾಗಾಗಿ, ಕೇಂದ್ರ ಹಣಕಾಸು ಸಚಿವಾಲಯವು ಆಯೋಗದ ಅನುಮತಿ ಪಡೆದ ಬಳಿಕವೇ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.</p>.<p>ರಾಬಿ ಅವಧಿಯಲ್ಲಿ ಉತ್ಪಾದನೆಯ ಅಂದಾಜು ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಆಧಾರದ ಮೇಲೆ ರಫ್ತು ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ಹೇಳಿದೆ.</p>.<p>ಕನಿಷ್ಠ ರಫ್ತು ದರವನ್ನು ಪ್ರತಿ ಕೆ.ಜಿಗೆ ₹46 ನಿಗದಿಪಡಿಸಿದೆ. ಅಲ್ಲದೆ, ಶೇ 40ರಷ್ಟು ರಫ್ತು ಸುಂಕವನ್ನೂ ವಿಧಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>