ಘಟನೆಯಿಂದ ಆಕ್ರೋಶಗೊಂಡ ನಂದಿಕುರಳಿ ಗ್ರಾಮಸ್ಥರು ರಾಯಬಾಗ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಎರಡು ಬಸ್ ಗಳ ಗಾಜುಗಳನ್ನು, ನಿಲ್ದಾಣದ ಕಚೇರಿಯಲ್ಲಿನ ಕಂಪ್ಯೂಟರ್ ಒಡೆದು ಹಾಕಿದ್ದಾರೆ. ಕೆಲವು ವಾಹನಗಳನ್ನೂ ಜಖಂಗೊಳಿಸಲಾಗಿದೆ. ಇದರಿಂದಾಗಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದರು. ಗುಂಪನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಇದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಂಗಡಿಗಳು ಬಂದ್ ಆಗಿವೆ.