<p><strong>ಬೆಂಗಳೂರು</strong>: ‘ಕೈಗಾರಿಕೆಗಳು ಆರ್ಥಿಕ ಬೆಳವಣಿಗೆಯ ಜೊತೆಗೆ ಪರಿಸರದ ಸುಸ್ಥಿರತೆಯನ್ನು ಕಾಯ್ದುಕೊಳ್ಳಬೇಕಿದೆ. ಮಾಲಿನ್ಯ, ಸಂಪನ್ಮೂಲಗಳ ಅತಿಯಾದ ಬಳಕೆ ಹಾಗೂ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಬೇಕಿದೆ’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.</p>.<p>ನಗರದಲ್ಲಿ ಬುಧವಾರ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಕರ್ನಾಟಕ ಘಟಕದಿಂದ ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಇಎಸ್ಜಿ (ಪರಿಸರ, ಸಾಮಾಜಿಕ ಮತ್ತು ಆಡಳಿತ) ಶೃಂಗ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತ್ಯಾಜ್ಯ ನಿರ್ವಹಣೆ, ವಾಯು ಗುಣಮಟ್ಟ ಸುಧಾರಣೆ, ಕೆರೆಗಳ ಪುನರುಜ್ಜೀವನ ಹಾಗೂ ಮಾಲಿನ್ಯ ತಡೆಗೆ ಸಂಬಂಧಿಸಿದಂತೆ ಹೊಸ ನೀತಿಗಳನ್ನು ರೂಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.</p>.<p>ಕೈಗಾರಿಕಾ ಅಭಿವೃದ್ಧಿಯ ವೇಳೆ ಪರಿಸರದ ಸುಸ್ಥಿರತೆ ಕಾಯ್ದುಕೊಳ್ಳಬೇಕು. ಪ್ರತಿಯೊಂದು ವಲಯವು ಹಸಿರು ತಂತ್ರಜ್ಞಾನ ಹಾಗೂ ಸುಸ್ಥಿರ ಬಳಕೆಯ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯು ಸದೃಢವಾಗಿ ಬೆಳೆಯುತ್ತಿದೆ. ದೇಶದಲ್ಲಿ ಸಾಂಪ್ರದಾಯಿಕ ಮಾದರಿ ಹಾಗೂ ಅತ್ಯಾಧುನಿಕ ಸೌಲಭ್ಯಗಳು ಇವೆ. ಇವುಗಳ ಬಳಕೆಯ ಮೂಲಕ ಸುಸ್ಥಿರತೆ ಸಾಧಿಸಬೇಕಿದೆ ಎಂದು ಹೇಳಿದರು.</p>.<p>ಸಿಐಐ ಕರ್ನಾಟಕದ ಅಧ್ಯಕ್ಷ ಎನ್. ವೇಣು ಮಾತನಾಡಿ, ‘ಪ್ರತಿಯೊಂದು ಕಂಪನಿಯು ಪರಿಸರ, ಸಾಮಾಜಿಕ ಹಾಗೂ ಆಡಳಿತ ವ್ಯವಸ್ಥೆಯ ಬಗ್ಗೆ ಅರಿವು ಹೊಂದಬೇಕು. ದೀರ್ಘಕಾಲದವರೆಗೆ ಪರಿಸರದ ಸುಸ್ಥಿರತೆ ಕಾಯ್ದುಕೊಳ್ಳಲು ಒತ್ತು ನೀಡಬೇಕು’ ಎಂದು ಹೇಳಿದರು.</p>.<p>ಸಿಐಐ ದಕ್ಷಿಣ ವಲಯದ ಮಾಜಿ ಅಧ್ಯಕ್ಷ ಬಿ. ಸಂತಾನಂ ಮಾತನಾಡಿ, ‘ನಮ್ಮ ಚೆನ್ನೈ ಕಾರ್ಖಾನೆಯಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ. 15 ಕೋಟಿ ಲೀಟರ್ನಷ್ಟು ನೀರು ಸಂಗ್ರಹಿಸಲಾಗುತ್ತಿದೆ. ಕುಡಿಯಲು ಇದೇ ನೀರನ್ನು ಬಳಸಲಾಗುತ್ತಿದೆ’ ಎಂದರು.</p>.<p>ಕಾರ್ಖಾನೆಯಲ್ಲಿ ₹4,500 ಕೋಟಿ ಹೂಡಿಕೆ ಮಾಡಿದ್ದು, 3 ಸಾವಿರ ಉದ್ಯೋಗಿಗಳು ಇದ್ದಾರೆ. ಪ್ರತಿದಿನ ಒಂದು ಸಾವಿರ ಕಿಲೊ ಲೀಟರ್ ನೀರು ಬಳಸಲಾಗುತ್ತಿದೆ. ಇಂತಹ ಮಾದರಿಯನ್ನು ಕಂಪನಿಗಳು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಸಿಐಐ ಉಪ ಕಾರ್ಯ ನಿರ್ವಾಹಕ ನಿರ್ದೇಶಕ ಎನ್. ಮುತ್ತುಸೆಜಿಯನ್, ನಿರ್ದೇಶಕಿ ರಾಧಿಕಾ ಧಲ್, ಕೆನ್ನಮೆಟಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿಜಯ ಕೃಷ್ಣನ್ ವೆಂಕಟೇಶನ್, ಸಂಯೋಜಕ ಸೋಹಂಜೀತ್ ರಾಂಧವಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೈಗಾರಿಕೆಗಳು ಆರ್ಥಿಕ ಬೆಳವಣಿಗೆಯ ಜೊತೆಗೆ ಪರಿಸರದ ಸುಸ್ಥಿರತೆಯನ್ನು ಕಾಯ್ದುಕೊಳ್ಳಬೇಕಿದೆ. ಮಾಲಿನ್ಯ, ಸಂಪನ್ಮೂಲಗಳ ಅತಿಯಾದ ಬಳಕೆ ಹಾಗೂ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಬೇಕಿದೆ’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.</p>.<p>ನಗರದಲ್ಲಿ ಬುಧವಾರ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಕರ್ನಾಟಕ ಘಟಕದಿಂದ ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಇಎಸ್ಜಿ (ಪರಿಸರ, ಸಾಮಾಜಿಕ ಮತ್ತು ಆಡಳಿತ) ಶೃಂಗ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತ್ಯಾಜ್ಯ ನಿರ್ವಹಣೆ, ವಾಯು ಗುಣಮಟ್ಟ ಸುಧಾರಣೆ, ಕೆರೆಗಳ ಪುನರುಜ್ಜೀವನ ಹಾಗೂ ಮಾಲಿನ್ಯ ತಡೆಗೆ ಸಂಬಂಧಿಸಿದಂತೆ ಹೊಸ ನೀತಿಗಳನ್ನು ರೂಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.</p>.<p>ಕೈಗಾರಿಕಾ ಅಭಿವೃದ್ಧಿಯ ವೇಳೆ ಪರಿಸರದ ಸುಸ್ಥಿರತೆ ಕಾಯ್ದುಕೊಳ್ಳಬೇಕು. ಪ್ರತಿಯೊಂದು ವಲಯವು ಹಸಿರು ತಂತ್ರಜ್ಞಾನ ಹಾಗೂ ಸುಸ್ಥಿರ ಬಳಕೆಯ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯು ಸದೃಢವಾಗಿ ಬೆಳೆಯುತ್ತಿದೆ. ದೇಶದಲ್ಲಿ ಸಾಂಪ್ರದಾಯಿಕ ಮಾದರಿ ಹಾಗೂ ಅತ್ಯಾಧುನಿಕ ಸೌಲಭ್ಯಗಳು ಇವೆ. ಇವುಗಳ ಬಳಕೆಯ ಮೂಲಕ ಸುಸ್ಥಿರತೆ ಸಾಧಿಸಬೇಕಿದೆ ಎಂದು ಹೇಳಿದರು.</p>.<p>ಸಿಐಐ ಕರ್ನಾಟಕದ ಅಧ್ಯಕ್ಷ ಎನ್. ವೇಣು ಮಾತನಾಡಿ, ‘ಪ್ರತಿಯೊಂದು ಕಂಪನಿಯು ಪರಿಸರ, ಸಾಮಾಜಿಕ ಹಾಗೂ ಆಡಳಿತ ವ್ಯವಸ್ಥೆಯ ಬಗ್ಗೆ ಅರಿವು ಹೊಂದಬೇಕು. ದೀರ್ಘಕಾಲದವರೆಗೆ ಪರಿಸರದ ಸುಸ್ಥಿರತೆ ಕಾಯ್ದುಕೊಳ್ಳಲು ಒತ್ತು ನೀಡಬೇಕು’ ಎಂದು ಹೇಳಿದರು.</p>.<p>ಸಿಐಐ ದಕ್ಷಿಣ ವಲಯದ ಮಾಜಿ ಅಧ್ಯಕ್ಷ ಬಿ. ಸಂತಾನಂ ಮಾತನಾಡಿ, ‘ನಮ್ಮ ಚೆನ್ನೈ ಕಾರ್ಖಾನೆಯಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ. 15 ಕೋಟಿ ಲೀಟರ್ನಷ್ಟು ನೀರು ಸಂಗ್ರಹಿಸಲಾಗುತ್ತಿದೆ. ಕುಡಿಯಲು ಇದೇ ನೀರನ್ನು ಬಳಸಲಾಗುತ್ತಿದೆ’ ಎಂದರು.</p>.<p>ಕಾರ್ಖಾನೆಯಲ್ಲಿ ₹4,500 ಕೋಟಿ ಹೂಡಿಕೆ ಮಾಡಿದ್ದು, 3 ಸಾವಿರ ಉದ್ಯೋಗಿಗಳು ಇದ್ದಾರೆ. ಪ್ರತಿದಿನ ಒಂದು ಸಾವಿರ ಕಿಲೊ ಲೀಟರ್ ನೀರು ಬಳಸಲಾಗುತ್ತಿದೆ. ಇಂತಹ ಮಾದರಿಯನ್ನು ಕಂಪನಿಗಳು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಸಿಐಐ ಉಪ ಕಾರ್ಯ ನಿರ್ವಾಹಕ ನಿರ್ದೇಶಕ ಎನ್. ಮುತ್ತುಸೆಜಿಯನ್, ನಿರ್ದೇಶಕಿ ರಾಧಿಕಾ ಧಲ್, ಕೆನ್ನಮೆಟಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿಜಯ ಕೃಷ್ಣನ್ ವೆಂಕಟೇಶನ್, ಸಂಯೋಜಕ ಸೋಹಂಜೀತ್ ರಾಂಧವಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>