<p><strong>ನವದೆಹಲಿ:</strong> ಆರೋಗ್ಯ ವಿಮೆಗೆ ಒಳಪಟ್ಟಿದ್ದ ನಿವೃತ್ತ ಉದ್ಯೋಗಿಗಳಿಗೂ ವೈದ್ಯಕೀಯ ಸೌಲಭ್ಯವನ್ನು ವಿಸ್ತರಿಸಲು ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್ಐಸಿ) ನಿರ್ಧರಿಸಿದೆ.</p>.<p>ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ನಿಗಮದ ಸಭೆಯಲ್ಲಿ ಈ ಕುರಿತ ನಿಯಮಾವಳಿಗಳನ್ನು ಸಡಿಲಿಸಲು ನಿರ್ಣಯ ಅಂಗೀಕರಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯವು ಶನಿವಾರ ತಿಳಿಸಿದೆ. </p>.<p>ಸಂಬಳ ಮಿತಿಯ ಹೆಚ್ಚಳದಿಂದಾಗಿ ಇಎಸ್ಐ ಆರೋಗ್ಯ ವಿಮೆಯಿಂದ ಹೊರಗುಳಿದಿದ್ದ ನಿವೃತ್ತರಿಗೆ ಈ ವೈದ್ಯಕೀಯ ಪ್ರಯೋಜನ ದೊರೆಯಲಿದೆ. ಆದರೆ, ಉದ್ಯೋಗಿಗಳು ನಿವೃತ್ತಿಗೂ ಅಥವಾ ಸ್ವಯಂ ನಿವೃತ್ತಿಗೂ ಮುಂಚೆ ವಿಮಾ ನೋಂದಣಿ ಮಾಡಿಸಿರಬೇಕಿದೆ ಎಂದು ತಿಳಿಸಿದೆ.</p>.<p>2012ರ ಏಪ್ರಿಲ್ 1ರ ನಂತರ ಕನಿಷ್ಠ ಐದು ವರ್ಷಗಳ ಕಾಲ ಆರೋಗ್ಯ ವಿಮೆ ಮಾಡಿಸಿ ಉದ್ಯೋಗದಲ್ಲಿದ್ದವರು ಅಥವಾ 2017ರ ಏಪ್ರಿಲ್ 1ರ ನಂತರ ಮಾಸಿಕ ₹30 ಸಾವಿರ ವೇತನದೊಂದಿಗೆ ನಿವೃತ್ತಿ, ಸ್ವಯಂ ನಿವೃತ್ತಿ ಪಡೆದ ಉದ್ಯೋಗಿಗಳಿಗೆ ಈ ಹೊಸ ಯೋಜನೆಯಡಿ ವೈದ್ಯಕೀಯ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದೆ. </p>.<p>ಇಎಸ್ಐ ಫಲಾನುಭವಿಗಳಿಗೆ ಹೆಚ್ಚಿನ ಆರೋಗ್ಯ ಸೌಕರ್ಯ ಕಲ್ಪಿಸಲು 2023ರಲ್ಲಿ ಅನುಷ್ಠಾನಗೊಳಿಸಿರುವ ಆಯುಷ್ ಹೊಸ ನೀತಿಯನ್ನು ನಿಗಮದ ಆಸ್ಪತ್ರೆಗಳಲ್ಲಿ ಅಳವಡಿಸಿಕೊಳ್ಳಲು ಸಭೆಯು ಅನುಮೋದನೆ ನೀಡಿದೆ ಎಂದು ಹೇಳಿದೆ.</p>.<p><strong>ಉಡುಪಿಯಲ್ಲಿ ಇಎಸ್ಐ ಆಸ್ಪತ್ರೆ:</strong></p>.<p>ಇದೇ ವೇಳೆ ವೈದ್ಯಕೀಯ ಆರೈಕೆಯ ಮೂಲ ಸೌಕರ್ಯದ ಬಲವರ್ಧನೆಗೂ ಸಭೆ ಅನುಮೋದನೆ ನೀಡಿದೆ ಎಂದು ಸಚಿವಾಲಯವು ತಿಳಿಸಿದೆ.</p>.<p>ಕರ್ನಾಟಕದ ಉಡುಪಿ ಮತ್ತು ಕೇರಳದ ಇಡುಕ್ಕಿಯಲ್ಲಿ ತಲಾ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ನಿರ್ಮಿಸಲು ನಿರ್ಧರಿಸಿದೆ. ಪಂಜಾಬ್ನ ಮಲೇರ್ಕೋಟ್ಲಾದಲ್ಲಿ 150 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲಿದೆ. ಈ ಆಸ್ಪತ್ರೆಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನಕ್ಕೂ ಅನುಮೋದನೆ ನೀಡಿದೆ ಎಂದು ವಿವರಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆರೋಗ್ಯ ವಿಮೆಗೆ ಒಳಪಟ್ಟಿದ್ದ ನಿವೃತ್ತ ಉದ್ಯೋಗಿಗಳಿಗೂ ವೈದ್ಯಕೀಯ ಸೌಲಭ್ಯವನ್ನು ವಿಸ್ತರಿಸಲು ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್ಐಸಿ) ನಿರ್ಧರಿಸಿದೆ.</p>.<p>ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ನಿಗಮದ ಸಭೆಯಲ್ಲಿ ಈ ಕುರಿತ ನಿಯಮಾವಳಿಗಳನ್ನು ಸಡಿಲಿಸಲು ನಿರ್ಣಯ ಅಂಗೀಕರಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯವು ಶನಿವಾರ ತಿಳಿಸಿದೆ. </p>.<p>ಸಂಬಳ ಮಿತಿಯ ಹೆಚ್ಚಳದಿಂದಾಗಿ ಇಎಸ್ಐ ಆರೋಗ್ಯ ವಿಮೆಯಿಂದ ಹೊರಗುಳಿದಿದ್ದ ನಿವೃತ್ತರಿಗೆ ಈ ವೈದ್ಯಕೀಯ ಪ್ರಯೋಜನ ದೊರೆಯಲಿದೆ. ಆದರೆ, ಉದ್ಯೋಗಿಗಳು ನಿವೃತ್ತಿಗೂ ಅಥವಾ ಸ್ವಯಂ ನಿವೃತ್ತಿಗೂ ಮುಂಚೆ ವಿಮಾ ನೋಂದಣಿ ಮಾಡಿಸಿರಬೇಕಿದೆ ಎಂದು ತಿಳಿಸಿದೆ.</p>.<p>2012ರ ಏಪ್ರಿಲ್ 1ರ ನಂತರ ಕನಿಷ್ಠ ಐದು ವರ್ಷಗಳ ಕಾಲ ಆರೋಗ್ಯ ವಿಮೆ ಮಾಡಿಸಿ ಉದ್ಯೋಗದಲ್ಲಿದ್ದವರು ಅಥವಾ 2017ರ ಏಪ್ರಿಲ್ 1ರ ನಂತರ ಮಾಸಿಕ ₹30 ಸಾವಿರ ವೇತನದೊಂದಿಗೆ ನಿವೃತ್ತಿ, ಸ್ವಯಂ ನಿವೃತ್ತಿ ಪಡೆದ ಉದ್ಯೋಗಿಗಳಿಗೆ ಈ ಹೊಸ ಯೋಜನೆಯಡಿ ವೈದ್ಯಕೀಯ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದೆ. </p>.<p>ಇಎಸ್ಐ ಫಲಾನುಭವಿಗಳಿಗೆ ಹೆಚ್ಚಿನ ಆರೋಗ್ಯ ಸೌಕರ್ಯ ಕಲ್ಪಿಸಲು 2023ರಲ್ಲಿ ಅನುಷ್ಠಾನಗೊಳಿಸಿರುವ ಆಯುಷ್ ಹೊಸ ನೀತಿಯನ್ನು ನಿಗಮದ ಆಸ್ಪತ್ರೆಗಳಲ್ಲಿ ಅಳವಡಿಸಿಕೊಳ್ಳಲು ಸಭೆಯು ಅನುಮೋದನೆ ನೀಡಿದೆ ಎಂದು ಹೇಳಿದೆ.</p>.<p><strong>ಉಡುಪಿಯಲ್ಲಿ ಇಎಸ್ಐ ಆಸ್ಪತ್ರೆ:</strong></p>.<p>ಇದೇ ವೇಳೆ ವೈದ್ಯಕೀಯ ಆರೈಕೆಯ ಮೂಲ ಸೌಕರ್ಯದ ಬಲವರ್ಧನೆಗೂ ಸಭೆ ಅನುಮೋದನೆ ನೀಡಿದೆ ಎಂದು ಸಚಿವಾಲಯವು ತಿಳಿಸಿದೆ.</p>.<p>ಕರ್ನಾಟಕದ ಉಡುಪಿ ಮತ್ತು ಕೇರಳದ ಇಡುಕ್ಕಿಯಲ್ಲಿ ತಲಾ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ನಿರ್ಮಿಸಲು ನಿರ್ಧರಿಸಿದೆ. ಪಂಜಾಬ್ನ ಮಲೇರ್ಕೋಟ್ಲಾದಲ್ಲಿ 150 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲಿದೆ. ಈ ಆಸ್ಪತ್ರೆಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನಕ್ಕೂ ಅನುಮೋದನೆ ನೀಡಿದೆ ಎಂದು ವಿವರಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>