ನವದೆಹಲಿ:ತೈಲದ ಮೇಲಿನ ಅಬಕಾರಿ ಸುಂಕವನ್ನು ಒಂದೂವರೆ ರೂಪಾಯಿ ಕಡಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ತೈಲ ಮಾರಾಟ ಕಂಪನಿಗಳು ದರದಲ್ಲಿ ₹1 ಇಳಿಕೆ ಮಾಡಲಿವೆ. ಇದರಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ₹2.50ರಷ್ಟು ಇಳಿಕೆಯಾಗಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದರು.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸಲ್ ದರ₹2.50 ಇಳಿಕೆ ಮಾಡಿದ್ದು, ರಾಜ್ಯ ಸರ್ಕಾರಗಳೂ ಸಹ ವ್ಯಾಟ್ ಕಡಿತಗೊಳಿಸಲು ಮೂಲಕ ತೈಲ ದರ ಇಳಿಕೆಗೆ ಕ್ರಮವಹಿಸಬೇಕು. ಈ ಕುರಿತುಮನವಿ ಮಾಡಿ ರಾಜ್ಯಸರ್ಕಾರಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ತೈಲದ ಮೇಲಿನ ಅಬಕಾರಿ ಸುಂಕ ಕಡಿತದಿಂದ ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಬೊಕ್ಕಸಕ್ಕೆ ₹10,500 ಕೋಟಿ ಹೊರೆಯಾಗಲಿದೆ ಎಂದರು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ಯಾರೆಲ್ಗೆ 86 ಡಾಲರ್ ತಲುಪಿದೆ. ಇದು ನಾಲ್ಕು ವರ್ಷಗಳಲ್ಲಿಯೇ ಅಧಿಕ ದರವಾಗಿದೆ ಹಾಗೂ ಅಮೆರಿಕದ ಬಡ್ಡಿ ದರ ಶೇ 3.2ಕ್ಕೆ ಏರಿಕೆಯಾಗಿದೆ. ಈ ಎಲ್ಲ ಅಂಶಗಳು ಜಾಗತಿಕ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿವೆ ಎಂದು ಜೇಟ್ಲಿ ತೈಲ ಬೆಲೆ ನಿರಂತರ ಏರಿಕೆಯ ಕುರಿತು ವಿವರಿಸಿದರು.
* ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಇಳಿಕೆ ಮಾಡಿ ಒಂದು ತಿಂಗಳಾಗಿದೆ. ಈಗ ಮತ್ತೆ ಸೆಸ್ ದರ ಇಳಿಕೆ ಇಲ್ಲ.
– ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ
ದೇಶದ ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ದರ