<p><strong>ನವದೆಹಲಿ</strong>: ದೇಶದ ರಫ್ತು ವಲಯಕ್ಕೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ₹45 ಸಾವಿರ ಕೋಟಿ ವೆಚ್ಚದ ಎರಡು ಯೋಜನೆಗಳಿಗೆ ಅನುಮೋದನೆ ನೀಡಿರುವುದರಿಂದ ದೇಶದ ರಫ್ತು ವಲಯ ಸದೃಢಗೊಳ್ಳಲಿದೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ದೇಶದ ರಫ್ತು ವಲಯದ ಸ್ಪರ್ಧಾತ್ಮಕತೆ ಹೆಚ್ಚಲಿದೆ ಎಂದು ರಫ್ತುದಾರರು ಹೇಳಿದ್ದಾರೆ.</p>.<p>ರಫ್ತು ಉತ್ತೇಜನಾ ಮಿಷನ್ಗೆ ₹25,060 ಕೋಟಿ ಮತ್ತು ಸಾಲ ಖಾತರಿ ಯೋಜನೆಗೆ ₹20 ಸಾವಿರ ಕೋಟಿ ಮೊತ್ತ ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟವು ಬುಧವಾರ ಒಪ್ಪಿದೆ. ಈ ಯೋಜನೆಗಳಿಂದ ಉದ್ಯಮಗಳಿಗೆ ಸಾಲವು ಕೈಗೆಟಕುವಂತಾಗಲಿದೆ ಎಂದು ರಫ್ತುದಾರರು ತಿಳಿಸಿದ್ದಾರೆ.</p>.<p>‘ಸರ್ಕಾರದ ಈ ಕ್ರಮವು ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳು (ಎಂಎಸ್ಎಂಇ), ಮೊದಲ ಬಾರಿಗೆ ರಫ್ತು ಮಾಡುವವರ ಕೈ ಬಲಪಡಿಸುವ ಉದ್ದೇಶ ಹೊಂದಿದೆ’ ಎಂದು ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ರಫ್ತು ವಿಭಾಗದ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಸಂಜಯ್ ಬುಧಿಯಾ ಹೇಳಿದ್ದಾರೆ.</p>.<p>‘ಕೇಂದ್ರ ಸರ್ಕಾರ ಈ ಯೋಜನೆಗಳಿಗೆ ಒಪ್ಪಿಗೆ ನೀಡಿರುವುದರಿಂದ ಉದ್ಯಮಗಳಿಗೆ ಹಣಕಾಸಿನ ನೆರವು ದೊರೆಯಲಿದೆ. ದೇಶದ ರಫ್ತು ವ್ಯವಸ್ಥೆ ಸದೃಢಗೊಳ್ಳಲಿದ್ದು, ಅಗಾಧ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ’ ಎಂದು ಸಿದ್ಧ ಉಡುಪು ರಫ್ತು ಉತ್ತೇಜನ ಮಂಡಳಿಯ (ಎಇಪಿಸಿ) ಉಪಾಧ್ಯಕ್ಷ ಎ. ಶಕ್ತಿವೇಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದ ರಫ್ತು ವಲಯಕ್ಕೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ₹45 ಸಾವಿರ ಕೋಟಿ ವೆಚ್ಚದ ಎರಡು ಯೋಜನೆಗಳಿಗೆ ಅನುಮೋದನೆ ನೀಡಿರುವುದರಿಂದ ದೇಶದ ರಫ್ತು ವಲಯ ಸದೃಢಗೊಳ್ಳಲಿದೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ದೇಶದ ರಫ್ತು ವಲಯದ ಸ್ಪರ್ಧಾತ್ಮಕತೆ ಹೆಚ್ಚಲಿದೆ ಎಂದು ರಫ್ತುದಾರರು ಹೇಳಿದ್ದಾರೆ.</p>.<p>ರಫ್ತು ಉತ್ತೇಜನಾ ಮಿಷನ್ಗೆ ₹25,060 ಕೋಟಿ ಮತ್ತು ಸಾಲ ಖಾತರಿ ಯೋಜನೆಗೆ ₹20 ಸಾವಿರ ಕೋಟಿ ಮೊತ್ತ ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟವು ಬುಧವಾರ ಒಪ್ಪಿದೆ. ಈ ಯೋಜನೆಗಳಿಂದ ಉದ್ಯಮಗಳಿಗೆ ಸಾಲವು ಕೈಗೆಟಕುವಂತಾಗಲಿದೆ ಎಂದು ರಫ್ತುದಾರರು ತಿಳಿಸಿದ್ದಾರೆ.</p>.<p>‘ಸರ್ಕಾರದ ಈ ಕ್ರಮವು ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳು (ಎಂಎಸ್ಎಂಇ), ಮೊದಲ ಬಾರಿಗೆ ರಫ್ತು ಮಾಡುವವರ ಕೈ ಬಲಪಡಿಸುವ ಉದ್ದೇಶ ಹೊಂದಿದೆ’ ಎಂದು ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ರಫ್ತು ವಿಭಾಗದ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಸಂಜಯ್ ಬುಧಿಯಾ ಹೇಳಿದ್ದಾರೆ.</p>.<p>‘ಕೇಂದ್ರ ಸರ್ಕಾರ ಈ ಯೋಜನೆಗಳಿಗೆ ಒಪ್ಪಿಗೆ ನೀಡಿರುವುದರಿಂದ ಉದ್ಯಮಗಳಿಗೆ ಹಣಕಾಸಿನ ನೆರವು ದೊರೆಯಲಿದೆ. ದೇಶದ ರಫ್ತು ವ್ಯವಸ್ಥೆ ಸದೃಢಗೊಳ್ಳಲಿದ್ದು, ಅಗಾಧ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ’ ಎಂದು ಸಿದ್ಧ ಉಡುಪು ರಫ್ತು ಉತ್ತೇಜನ ಮಂಡಳಿಯ (ಎಇಪಿಸಿ) ಉಪಾಧ್ಯಕ್ಷ ಎ. ಶಕ್ತಿವೇಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>