ಜಿಲ್ಲೆಯಲ್ಲಿ ಈ ಬಾರಿ ಅತಿ ಹೆಚ್ಚು ಜೋಳ ಬೆಳೆಯಲಾಗಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ,ಬೆಲೆ ಕುಸಿದು ರೈತರು ಸಂಕಷ್ಟದದಲ್ಲಿದ್ದಾರೆ. ಸರ್ಕಾರ ಜೋಳಕ್ಕೆ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು, ಇಲ್ಲದಿದ್ದರೆ ಬಿಜೆಪಿ ಪಕ್ಷದ ವತಿಯಿಂದ ಎಪಿಎಂಸಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಶರ್ಮ, ಮುಖಂಡರಾದ ಪ್ರಕಾಶ್, ಮಂಜುನಾಥ್ ಇದ್ದರು.