<p><strong>ಮುಂಬೈ:</strong> ‘ಕೋವಿಡ್–19 ಸಾಂಕ್ರಾಮಿಕವು ಕೃಷಿ ಚಟುವಟಿಕೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಹೀಗಾಗಿ ಈ ಬಾರಿ ಕೃಷಿ ವರಮಾನ ಹೆಚ್ಚಾಗುವ ನಿರೀಕ್ಷೆ ಮಾಡಲಾಗಿದೆ. ಅದರಿಂದಾಗಿ ಟ್ರ್ಯಾಕ್ಟರ್ ಮಾರಾಟದಲ್ಲಿಯೂ ಏರಿಕೆ ಕಂಡುಬರಲಿದೆ’ ಎಂದು ರೇಟಿಂಗ್ಸ್ ಸಂಸ್ಥೆ ಕ್ರಿಸಿಲ್ ಅಭಿಪ್ರಾಯಪಟ್ಟಿದೆ.</p>.<p>ಟ್ರ್ಯಾಕ್ಟರ್ ಮಾರಾಟವು ಶೇಕಡ 1ರಷ್ಟು ಕುಸಿತ ಕಾಣಲಿದೆ ಎಂದು ಈ ಹಿಂದೆ ಅದು ಅಂದಾಜು ಮಾಡಿತ್ತು. ಆದರೆ, ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ನಿರೀಕ್ಷೆಗಿಂತಲೂ ವೇಗವಾಗಿ ಚೇತರಿಕೆ ಕಾಣಲಿದ್ದು, ಶೇ 10–12ರಷ್ಟು ಪ್ರಗತಿ ಸಾಧ್ಯವಾಗಲಿದೆ ಎಂದು ತಿಳಿಸಿದೆ.</p>.<p>ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಮುಂಗಾರು ಬಿತ್ತನೆ ಗರಿಷ್ಠ ಮಟ್ಟದಲ್ಲಿದ್ದು, ಮುಂಗಾರು ಉತ್ತಮವಾಗಿದೆ. ಇದರಿಂದಾಗಿ ಕೃಷಿ ವರಮಾನ ಹೆಚ್ಚಾಗಲಿದೆ ಎಂದು ಹೇಳಿದೆ.</p>.<p>ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ಟ್ರ್ಯಾಕ್ಟರ್ ಉದ್ದಿಮೆಯು ಶೇ 12ರಷ್ಟು ಪ್ರಗತಿ ಸಾಧಿಸಿದೆ. ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಕ್ರಮವಾಗಿ ಶೇ 45 ಮತ್ತು ಶೇ 13ರಷ್ಟು ಬೇಡಿಕೆ ಬಂದಿತ್ತು.</p>.<p>ಹಣಕಾಸು ವರ್ಷದ ಮೊದಲ ಆರು ತಿಂಗಳಿನಲ್ಲಿ ಕೃಷಿ ವಲಯದ ಮೇಲೆ ಸರ್ಕಾರದ ವೆಚ್ಚವು ಹೆಚ್ಚಾಗಿದೆ. 2020–21ನೇ ಮಾರುಕಟ್ಟೆ ವರ್ಷಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನೂ ಹೆಚ್ಚಿಸಲಾಗಿದೆ. ಈ ಅಂಶಗಳು ಸಹ ಕೃಷಿ ವರಮಾನದ ಏರಿಕೆಗೆ ಕಾರಣವಾಗಲಿವೆ. ಈ ಮೂಲಕ ಟ್ರ್ಯಾಕ್ಟರ್ ಮಾರಾಟ ಹೆಚ್ಚಾಗಲಿದೆ ಎಂದು ಕ್ರಿಸಿಲ್ನ ನಿರ್ದೇಶಕ ಗೌತಮ್ ಶಾಹಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಕೋವಿಡ್–19 ಸಾಂಕ್ರಾಮಿಕವು ಕೃಷಿ ಚಟುವಟಿಕೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಹೀಗಾಗಿ ಈ ಬಾರಿ ಕೃಷಿ ವರಮಾನ ಹೆಚ್ಚಾಗುವ ನಿರೀಕ್ಷೆ ಮಾಡಲಾಗಿದೆ. ಅದರಿಂದಾಗಿ ಟ್ರ್ಯಾಕ್ಟರ್ ಮಾರಾಟದಲ್ಲಿಯೂ ಏರಿಕೆ ಕಂಡುಬರಲಿದೆ’ ಎಂದು ರೇಟಿಂಗ್ಸ್ ಸಂಸ್ಥೆ ಕ್ರಿಸಿಲ್ ಅಭಿಪ್ರಾಯಪಟ್ಟಿದೆ.</p>.<p>ಟ್ರ್ಯಾಕ್ಟರ್ ಮಾರಾಟವು ಶೇಕಡ 1ರಷ್ಟು ಕುಸಿತ ಕಾಣಲಿದೆ ಎಂದು ಈ ಹಿಂದೆ ಅದು ಅಂದಾಜು ಮಾಡಿತ್ತು. ಆದರೆ, ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ನಿರೀಕ್ಷೆಗಿಂತಲೂ ವೇಗವಾಗಿ ಚೇತರಿಕೆ ಕಾಣಲಿದ್ದು, ಶೇ 10–12ರಷ್ಟು ಪ್ರಗತಿ ಸಾಧ್ಯವಾಗಲಿದೆ ಎಂದು ತಿಳಿಸಿದೆ.</p>.<p>ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಮುಂಗಾರು ಬಿತ್ತನೆ ಗರಿಷ್ಠ ಮಟ್ಟದಲ್ಲಿದ್ದು, ಮುಂಗಾರು ಉತ್ತಮವಾಗಿದೆ. ಇದರಿಂದಾಗಿ ಕೃಷಿ ವರಮಾನ ಹೆಚ್ಚಾಗಲಿದೆ ಎಂದು ಹೇಳಿದೆ.</p>.<p>ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ಟ್ರ್ಯಾಕ್ಟರ್ ಉದ್ದಿಮೆಯು ಶೇ 12ರಷ್ಟು ಪ್ರಗತಿ ಸಾಧಿಸಿದೆ. ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಕ್ರಮವಾಗಿ ಶೇ 45 ಮತ್ತು ಶೇ 13ರಷ್ಟು ಬೇಡಿಕೆ ಬಂದಿತ್ತು.</p>.<p>ಹಣಕಾಸು ವರ್ಷದ ಮೊದಲ ಆರು ತಿಂಗಳಿನಲ್ಲಿ ಕೃಷಿ ವಲಯದ ಮೇಲೆ ಸರ್ಕಾರದ ವೆಚ್ಚವು ಹೆಚ್ಚಾಗಿದೆ. 2020–21ನೇ ಮಾರುಕಟ್ಟೆ ವರ್ಷಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನೂ ಹೆಚ್ಚಿಸಲಾಗಿದೆ. ಈ ಅಂಶಗಳು ಸಹ ಕೃಷಿ ವರಮಾನದ ಏರಿಕೆಗೆ ಕಾರಣವಾಗಲಿವೆ. ಈ ಮೂಲಕ ಟ್ರ್ಯಾಕ್ಟರ್ ಮಾರಾಟ ಹೆಚ್ಚಾಗಲಿದೆ ಎಂದು ಕ್ರಿಸಿಲ್ನ ನಿರ್ದೇಶಕ ಗೌತಮ್ ಶಾಹಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>