ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ (ಅಸೋಚಾಂ) ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ‘ಖಾಸಗಿ ವಲಯದ ದೊಡ್ಡ ಮಟ್ಟದ ಪಾಲ್ಗೊಳ್ಳುವಿಕೆ ಇಲ್ಲದೆ ಕೃಷಿ ಕ್ಷೇತ್ರದಲ್ಲಿ ಭಾರಿ ಬದಲಾವಣೆ ನಿರೀಕ್ಷಿಸುವಂತಿಲ್ಲ. ಸಾಂಪ್ರದಾಯಿಕ ಕೃಷಿಯಿಂದ ಆಧುನಿಕತೆಯತ್ತ ತ್ವರಿತವಾಗಿ ಬದಲಾಗಲು ಖಾಸಗಿ ಬಂಡವಾಳ ಹೂಡಿಕೆಯ ಅಗತ್ಯ ಇದೆ. ಕಾರ್ಪೊರೇಟ್ ವಲಯದ ಹೂಡಿಕೆ ಮತ್ತು ಭಾಗವಹಿಸುವಿಕೆ ಇಲ್ಲದೆ ಕೃಷಿಕರ ಆದಾಯ ದುಪ್ಪಟ್ಟುಗೊಳಿಸುವುದು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.