‘ಸಾವಿರಾರು ರೂಪಾಯಿ ಖರ್ಚು ಮಾಡಿ ಈರುಳ್ಳಿ ಬೆಳೆಯಲಾಗಿದೆ. ಆದರೆ, ಕಡಿಮೆ ದರ ನಿಗದಿ ಮಾಡಲಾಗುತ್ತಿದೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಅನ್ನದಾತರ ಕಷ್ಟ ಅರ್ಥವಾಗುತ್ತಿಲ್ಲ. ರೈತರಿಗೆ ಆಗುವ ಮೋಸದ ಬಗ್ಗೆ ಯಾರಿಗೂ ಗಮನವಿಲ್ಲದಂತಾಗಿದೆ. ಹೀಗಾದರೆ, ರೈತ ಬದಕುವುದು ಹೇಗೆ’ ಎಂದು ಪ್ರಶ್ನಿಸಿದರು. ‘ಕೆಲ ದಿನಗಳ ಹಿಂದೆ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್ಗೆ ₹1,500 ಇತ್ತು. ಶನಿವಾರ ₹ 50 ರಿಂದ ₹500 ಆಗಿದೆ. ರೈತರ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ಬರುತ್ತದೆ’ ಎಂದು ಬೆಳಗಾವಿಯಲ್ಲಿ ರೈತ ಎಂ.ಎಂ. ಲಮಾಣಿ ಆಕ್ರೋಶ ವ್ಯಕ್ತಪಡಿಸಿದರು.