<p class="bodytext"><strong>ನವದೆಹಲಿ:</strong> ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಪರಿಣಾಮವಾಗಿ ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರದ ಆರ್ಥಿಕತೆಗೆ ನಷ್ಟ ಉಂಟಾಗುತ್ತಿದೆ ಎಂದು ‘ಅಸೋಚಾಂ’ ಹೇಳಿದೆ.</p>.<p class="bodytext">ಈ ಕೃಷಿ ಕಾಯ್ದೆಗಳ ವಿಚಾರವಾಗಿ ಸೃಷ್ಟಿಯಾಗಿರುವ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಅದು ಕೇಂದ್ರ ಸರ್ಕಾರ ಹಾಗೂ ರೈತ ಸಂಘಟನೆಗಳಲ್ಲಿ ಮನವಿ ಮಾಡಿದೆ.</p>.<p class="bodytext">‘ಪ್ರತಿಭಟನೆ ನಡೆಯುತ್ತಿರುವ ಪ್ರದೇಶಗಳ ಅರ್ಥ ವ್ಯವಸ್ಥೆಗಳು ಪ್ರತಿ ದಿನ ₹ 3,000 ಕೋಟಿಯಿಂದ ₹ 3,500 ಕೋಟಿಯಷ್ಟು ನಷ್ಟ ಅನುಭವಿಸುತ್ತಿವೆ. ಪ್ರತಿಭಟನೆಗಳ ಕಾರಣದಿಂದಾಗಿ ಸರಕು ಸಾಗಣೆಗೆ ಕೂಡ ತೊಂದರೆ ಆಗಿದೆ’ ಎಂದು ಅಸೋಚಾಂ ಅಂದಾಜಿಸಿದೆ.</p>.<p class="bodytext">‘ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರದ ಅರ್ಥ ವ್ಯವಸ್ಥೆಗಳ ಒಟ್ಟು ಗಾತ್ರವು ₹ 18 ಲಕ್ಷ ಕೋಟಿ. ರೈತರ ಪ್ರತಿಭಟನೆ ಹಾಗೂ ರಸ್ತೆ ತಡೆ, ರೈಲು ಸೇವೆಗಳಲ್ಲಿ ವ್ಯತ್ಯಾಸ ಆಗಿರುವುದರ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳು ಸ್ಥಗಿತದ ಸ್ಥಿತಿ ತಲುಪಿವೆ’ ಎಂದು ಅಸೋಚಾಂ ಅಧ್ಯಕ್ಷ ನಿರಂಜನ್ ಹೀರಾನಂದಾನಿ ಹೇಳಿದ್ದಾರೆ.</p>.<p class="bodytext">ರೈತರ ಪ್ರತಿಭಟನೆಯಿಂದಾಗಿ ಪೂರೈಕೆ ವ್ಯವಸ್ಥೆಗೆ ಏಟು ಬಿದ್ದಿದೆ. ಇದು ಮುಂದಿನ ದಿನಗಳಲ್ಲಿ ಅರ್ಥ ವ್ಯವಸ್ಥೆಗೆ ತೊಂದರೆ ನೀಡಲಿದೆ. ಹಾಗೆಯೇ, ಕೋವಿಡ್–19ರಿಂದಾಗಿ ಆಗಿರುವ ಆರ್ಥಿಕ ಹಿಂಜರಿತದಿಂದ ಹೊರಬರುವ ಪ್ರಕ್ರಿಯೆಯ ಮೇಲೆಯೂ ಪರಿಣಾಮ ಉಂಟುಮಾಡಬಹುದು ಎಂದು ಭಾರತೀಯ ಕೈಗಾರಿಕಾ ಮಹಾಸಂಘ (ಸಿಐಐ) ಸೋಮವಾರ ಹೇಳಿತ್ತು.</p>.<p class="bodytext">ಜವಳಿ, ಆಟೊಮೊಬೈಲ್ ಬಿಡಿಭಾಗಗಳು, ಬೈಸಿಕಲ್, ಕ್ರೀಡಾ ಉತ್ಪನ್ನಗಳ ಉದ್ದಿಮೆಗಳು ಹೊರದೇಶಗಳ ಮಾರುಕಟ್ಟೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪನ್ನಗಳನ್ನು ರಫ್ತು ಮಾಡುತ್ತವೆ. ಆದರೆ, ಪ್ರತಿಭಟನೆಯ ಕಾರಣದಿಂದಾಗಿ ಈ ವಲಯದ ಉದ್ದಿಮೆಗಳಿಗೆ ಬೇಡಿಕೆಗೆ ತಕ್ಕಂತೆ ಉತ್ಪನ್ನಗಳನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಉದ್ಯಮ ವಲಯವು ಜಾಗತಿಕ ಮಟ್ಟದಲ್ಲಿ ಹೊಂದಿರುವ ಒಳ್ಳೆಯ ಹೆಸರಿಗೂ ಧಕ್ಕೆ ಆಗುತ್ತದೆ ಎಂದು ಹೀರಾನಂದಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p class="bodytext">ದೆಹಲಿ ಮತ್ತು ಅದರ ಸುತ್ತಲಿನ ಪ್ರದೇಶಗಳಲ್ಲಿ ಕಳೆದ ಇಪ್ಪತ್ತು ದಿನಗಳ ಅವಧಿಯಲ್ಲಿ ಒಟ್ಟು ₹ 5 ಸಾವಿರ ಕೋಟಿ ಮೌಲ್ಯದ ವ್ಯಾಪಾರ ವಹಿವಾಟುಗಳಿಗೆ ತೊಂದರೆ ಆಗಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಮಹಾಸಂಘ (ಸಿಎಐಟಿ) ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ:</strong> ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಪರಿಣಾಮವಾಗಿ ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರದ ಆರ್ಥಿಕತೆಗೆ ನಷ್ಟ ಉಂಟಾಗುತ್ತಿದೆ ಎಂದು ‘ಅಸೋಚಾಂ’ ಹೇಳಿದೆ.</p>.<p class="bodytext">ಈ ಕೃಷಿ ಕಾಯ್ದೆಗಳ ವಿಚಾರವಾಗಿ ಸೃಷ್ಟಿಯಾಗಿರುವ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಅದು ಕೇಂದ್ರ ಸರ್ಕಾರ ಹಾಗೂ ರೈತ ಸಂಘಟನೆಗಳಲ್ಲಿ ಮನವಿ ಮಾಡಿದೆ.</p>.<p class="bodytext">‘ಪ್ರತಿಭಟನೆ ನಡೆಯುತ್ತಿರುವ ಪ್ರದೇಶಗಳ ಅರ್ಥ ವ್ಯವಸ್ಥೆಗಳು ಪ್ರತಿ ದಿನ ₹ 3,000 ಕೋಟಿಯಿಂದ ₹ 3,500 ಕೋಟಿಯಷ್ಟು ನಷ್ಟ ಅನುಭವಿಸುತ್ತಿವೆ. ಪ್ರತಿಭಟನೆಗಳ ಕಾರಣದಿಂದಾಗಿ ಸರಕು ಸಾಗಣೆಗೆ ಕೂಡ ತೊಂದರೆ ಆಗಿದೆ’ ಎಂದು ಅಸೋಚಾಂ ಅಂದಾಜಿಸಿದೆ.</p>.<p class="bodytext">‘ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರದ ಅರ್ಥ ವ್ಯವಸ್ಥೆಗಳ ಒಟ್ಟು ಗಾತ್ರವು ₹ 18 ಲಕ್ಷ ಕೋಟಿ. ರೈತರ ಪ್ರತಿಭಟನೆ ಹಾಗೂ ರಸ್ತೆ ತಡೆ, ರೈಲು ಸೇವೆಗಳಲ್ಲಿ ವ್ಯತ್ಯಾಸ ಆಗಿರುವುದರ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳು ಸ್ಥಗಿತದ ಸ್ಥಿತಿ ತಲುಪಿವೆ’ ಎಂದು ಅಸೋಚಾಂ ಅಧ್ಯಕ್ಷ ನಿರಂಜನ್ ಹೀರಾನಂದಾನಿ ಹೇಳಿದ್ದಾರೆ.</p>.<p class="bodytext">ರೈತರ ಪ್ರತಿಭಟನೆಯಿಂದಾಗಿ ಪೂರೈಕೆ ವ್ಯವಸ್ಥೆಗೆ ಏಟು ಬಿದ್ದಿದೆ. ಇದು ಮುಂದಿನ ದಿನಗಳಲ್ಲಿ ಅರ್ಥ ವ್ಯವಸ್ಥೆಗೆ ತೊಂದರೆ ನೀಡಲಿದೆ. ಹಾಗೆಯೇ, ಕೋವಿಡ್–19ರಿಂದಾಗಿ ಆಗಿರುವ ಆರ್ಥಿಕ ಹಿಂಜರಿತದಿಂದ ಹೊರಬರುವ ಪ್ರಕ್ರಿಯೆಯ ಮೇಲೆಯೂ ಪರಿಣಾಮ ಉಂಟುಮಾಡಬಹುದು ಎಂದು ಭಾರತೀಯ ಕೈಗಾರಿಕಾ ಮಹಾಸಂಘ (ಸಿಐಐ) ಸೋಮವಾರ ಹೇಳಿತ್ತು.</p>.<p class="bodytext">ಜವಳಿ, ಆಟೊಮೊಬೈಲ್ ಬಿಡಿಭಾಗಗಳು, ಬೈಸಿಕಲ್, ಕ್ರೀಡಾ ಉತ್ಪನ್ನಗಳ ಉದ್ದಿಮೆಗಳು ಹೊರದೇಶಗಳ ಮಾರುಕಟ್ಟೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪನ್ನಗಳನ್ನು ರಫ್ತು ಮಾಡುತ್ತವೆ. ಆದರೆ, ಪ್ರತಿಭಟನೆಯ ಕಾರಣದಿಂದಾಗಿ ಈ ವಲಯದ ಉದ್ದಿಮೆಗಳಿಗೆ ಬೇಡಿಕೆಗೆ ತಕ್ಕಂತೆ ಉತ್ಪನ್ನಗಳನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಉದ್ಯಮ ವಲಯವು ಜಾಗತಿಕ ಮಟ್ಟದಲ್ಲಿ ಹೊಂದಿರುವ ಒಳ್ಳೆಯ ಹೆಸರಿಗೂ ಧಕ್ಕೆ ಆಗುತ್ತದೆ ಎಂದು ಹೀರಾನಂದಾನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p class="bodytext">ದೆಹಲಿ ಮತ್ತು ಅದರ ಸುತ್ತಲಿನ ಪ್ರದೇಶಗಳಲ್ಲಿ ಕಳೆದ ಇಪ್ಪತ್ತು ದಿನಗಳ ಅವಧಿಯಲ್ಲಿ ಒಟ್ಟು ₹ 5 ಸಾವಿರ ಕೋಟಿ ಮೌಲ್ಯದ ವ್ಯಾಪಾರ ವಹಿವಾಟುಗಳಿಗೆ ತೊಂದರೆ ಆಗಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಮಹಾಸಂಘ (ಸಿಎಐಟಿ) ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>