<p><strong>ನವದೆಹಲಿ:</strong> ‘ಹಣಕಾಸು ಮಸೂದೆ 2019ರಲ್ಲಿನ ತೆರಿಗೆ ಪ್ರಸ್ತಾವಗಳು ನಾಗರಿಕರ ಮೇಲಿನ ಹೊರೆ ತಗ್ಗಿಸಲಿದ್ದು, ಜೀವನಮಟ್ಟ ಸುಧಾರಣೆಗೆ ನೆರವಾಗಲಿವೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.</p>.<p>ಲೋಕಸಭೆಯಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ಅವರು, ಬಜೆಟ್ ಪ್ರಸ್ತಾವಗಳು ‘ಭಾರತದಲ್ಲಿಯೇ ತಯಾರಿಸಿ’ ಮತ್ತು ಡಿಜಿಟಲ್ ಪಾವತಿ ಉತ್ತೇಜಿಸಲಿವೆ. ಜನರ ಬದುಕನ್ನು ಸುಲಲಿತಗೊಳಿಸಲಿವೆ’ ಎಂದು ತಿಳಿಸಿದ್ದಾರೆ.</p>.<p>ವಿದೇಶಿ ಹೂಡಿಕೆದಾರರ ಮೇಲೆ ತೆರಿಗೆ, ಬ್ಯಾಂಕ್ಗಳಿಂದ ₹ 1 ಕೋಟಿಗಿಂತ ಹೆಚ್ಚಿನ ಮೊತ್ತದ ನಗದು ಹಿಂದೆ ಪಡೆಯುವುದರ ಮೇಲೆ ಶೇ 2ರಷ್ಟು ಮೂಲದಲ್ಲಿಯೇ ತೆರಿಗೆ ಕಡಿತ (ಟಿಡಿಎಸ್) ಕ್ರಮವನ್ನು ಸಚಿವೆ ಸಮರ್ಥಿಸಿಕೊಂಡಿದ್ದಾರೆ.</p>.<p>ವಾರ್ಷಿಕ ಆದಾಯ ₹ 2 ಕೋಟಿಗಿಂತ ಹೆಚ್ಚಿಗೆ ಇರುವ ವ್ಯಕ್ತಿಗಳ ಮೇಲೆ ತೆರಿಗೆ ಹೊರೆ ಹೆಚ್ಚಿಸುವ ಪ್ರಸ್ತಾವವು ವಿದೇಶಿ ಹೂಡಿಕೆದಾರರನ್ನು (ಎಫ್ಪಿಐ) ಬಾಧಿಸಲಾರದು. ಈ ಹೂಡಿಕೆದಾರರು ಕಂಪನಿ ಹೆಸರಿನಲ್ಲಿ ಹಣ ತೊಡಗಿಸುವುದರಿಂದ ಅವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಾರದು ಎಂದು ವಿವರಣೆ ನೀಡಿದ್ದಾರೆ.</p>.<p>‘ಹೊಸ ನೇರ ತೆರಿಗೆ ಸಂಹಿತೆ (ಡಿಟಿಸಿ) ಅಂತಿಮಗೊಳಿಸಲು ಹಣಕಾಸು ಸಚಿವಾಲಯವು ಈಗಾಗಲೇ ಕಾರ್ಯಪಡೆ ರಚಿಸಿದೆ’ ಎಂದು ತಿಳಿಸಿದ್ದಾರೆ. ನ್ಯೂಸ್ಪ್ರಿಂಟ್ ಮೇಲಿನ ಶೇ 10ರಷ್ಟು ಕಸ್ಟಮ್ಸ್ ಡ್ಯೂಟಿ ಹೆಚ್ಚಳ ರದ್ದು ಮಾಡಲು ಪ್ರತಿಪಕ್ಷಗಳು ಒತ್ತಾಯಿಸಿದ್ದರೂ ಆ ಬಗ್ಗೆ ಏನನ್ನೂ ಹೇಳಿಲ್ಲ.</p>.<p>ನ್ಯೂಸ್ಪ್ರಿಂಟ್ ಮೇಲಿನ ಕಸ್ಟಮ್ಸ್ ಡ್ಯೂಟಿ ಹೆಚ್ಚಳವು ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಿಗೆ ಮಾರಕವಾಗಿರಲಿದೆ. ಹೀಗಾಗಿ ಅದನ್ನು ಕೈಬಿಡಬೇಕು ಎಂದು ಹಲವು ಸದಸ್ಯರು ಸರ್ಕಾರವನ್ನು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಹಣಕಾಸು ಮಸೂದೆ 2019ರಲ್ಲಿನ ತೆರಿಗೆ ಪ್ರಸ್ತಾವಗಳು ನಾಗರಿಕರ ಮೇಲಿನ ಹೊರೆ ತಗ್ಗಿಸಲಿದ್ದು, ಜೀವನಮಟ್ಟ ಸುಧಾರಣೆಗೆ ನೆರವಾಗಲಿವೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.</p>.<p>ಲೋಕಸಭೆಯಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ಅವರು, ಬಜೆಟ್ ಪ್ರಸ್ತಾವಗಳು ‘ಭಾರತದಲ್ಲಿಯೇ ತಯಾರಿಸಿ’ ಮತ್ತು ಡಿಜಿಟಲ್ ಪಾವತಿ ಉತ್ತೇಜಿಸಲಿವೆ. ಜನರ ಬದುಕನ್ನು ಸುಲಲಿತಗೊಳಿಸಲಿವೆ’ ಎಂದು ತಿಳಿಸಿದ್ದಾರೆ.</p>.<p>ವಿದೇಶಿ ಹೂಡಿಕೆದಾರರ ಮೇಲೆ ತೆರಿಗೆ, ಬ್ಯಾಂಕ್ಗಳಿಂದ ₹ 1 ಕೋಟಿಗಿಂತ ಹೆಚ್ಚಿನ ಮೊತ್ತದ ನಗದು ಹಿಂದೆ ಪಡೆಯುವುದರ ಮೇಲೆ ಶೇ 2ರಷ್ಟು ಮೂಲದಲ್ಲಿಯೇ ತೆರಿಗೆ ಕಡಿತ (ಟಿಡಿಎಸ್) ಕ್ರಮವನ್ನು ಸಚಿವೆ ಸಮರ್ಥಿಸಿಕೊಂಡಿದ್ದಾರೆ.</p>.<p>ವಾರ್ಷಿಕ ಆದಾಯ ₹ 2 ಕೋಟಿಗಿಂತ ಹೆಚ್ಚಿಗೆ ಇರುವ ವ್ಯಕ್ತಿಗಳ ಮೇಲೆ ತೆರಿಗೆ ಹೊರೆ ಹೆಚ್ಚಿಸುವ ಪ್ರಸ್ತಾವವು ವಿದೇಶಿ ಹೂಡಿಕೆದಾರರನ್ನು (ಎಫ್ಪಿಐ) ಬಾಧಿಸಲಾರದು. ಈ ಹೂಡಿಕೆದಾರರು ಕಂಪನಿ ಹೆಸರಿನಲ್ಲಿ ಹಣ ತೊಡಗಿಸುವುದರಿಂದ ಅವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಾರದು ಎಂದು ವಿವರಣೆ ನೀಡಿದ್ದಾರೆ.</p>.<p>‘ಹೊಸ ನೇರ ತೆರಿಗೆ ಸಂಹಿತೆ (ಡಿಟಿಸಿ) ಅಂತಿಮಗೊಳಿಸಲು ಹಣಕಾಸು ಸಚಿವಾಲಯವು ಈಗಾಗಲೇ ಕಾರ್ಯಪಡೆ ರಚಿಸಿದೆ’ ಎಂದು ತಿಳಿಸಿದ್ದಾರೆ. ನ್ಯೂಸ್ಪ್ರಿಂಟ್ ಮೇಲಿನ ಶೇ 10ರಷ್ಟು ಕಸ್ಟಮ್ಸ್ ಡ್ಯೂಟಿ ಹೆಚ್ಚಳ ರದ್ದು ಮಾಡಲು ಪ್ರತಿಪಕ್ಷಗಳು ಒತ್ತಾಯಿಸಿದ್ದರೂ ಆ ಬಗ್ಗೆ ಏನನ್ನೂ ಹೇಳಿಲ್ಲ.</p>.<p>ನ್ಯೂಸ್ಪ್ರಿಂಟ್ ಮೇಲಿನ ಕಸ್ಟಮ್ಸ್ ಡ್ಯೂಟಿ ಹೆಚ್ಚಳವು ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಿಗೆ ಮಾರಕವಾಗಿರಲಿದೆ. ಹೀಗಾಗಿ ಅದನ್ನು ಕೈಬಿಡಬೇಕು ಎಂದು ಹಲವು ಸದಸ್ಯರು ಸರ್ಕಾರವನ್ನು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>