ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಬ್ಯಾಂಕ್‌ಗಳ ಮುಖ್ಯಸ್ಥರ ಜತೆ ನಿರ್ಮಲಾ ಸಭೆ

Published 30 ಡಿಸೆಂಬರ್ 2023, 16:29 IST
Last Updated 30 ಡಿಸೆಂಬರ್ 2023, 16:29 IST
ಅಕ್ಷರ ಗಾತ್ರ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ಕೇಂದ್ರ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಮುಖ್ಯಸ್ಥರ ಜತೆ ಸಭೆ ನಡೆಸಿದರು.

ಪ್ರಸಕ್ತ ವರ್ಷದಲ್ಲಿನ ಹಣಕಾಸು ನಿರ್ವಹಣೆ, ಸೈಬರ್‌ ಅಪರಾಧ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಬ್ಯಾಂಕಿಂಗ್‌ ಕ್ಷೇತ್ರ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದಾರೆ ಎಂದು ಮೂಲಗಳು ತಿಳಿಸಿವೆ.

ವಂಚನೆ, ಸುಸ್ತಿದಾರರು, ರಾಷ್ಟ್ರೀಯ ಆಸ್ತಿ ಪುನರ್‌ರಚನಾ ಕಂಪನಿಯ (ಎನ್‌ಎಆರ್‌ಸಿಎಲ್‌) ಪ್ರಗತಿಯು ಚರ್ಚೆಯಲ್ಲಿ ಪ್ರಸ್ತಾವವಾಯಿತು ಎಂದು ತಿಳಿಸಿವೆ. 

ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದ ಆರು ತಿಂಗಳಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ₹68,500 ಕೋಟಿ ಲಾಭ ಗಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT