ಕಾರ್ಪೊರೇಟ್ ತೆರಿಗೆ ಕಡಿತಗೊಳಿಸುವ ನಿಟ್ಟಿನಲ್ಲಿ ಮಸೂದೆಗೆ ತಿದ್ದುಪಡಿ ಪ್ರಸ್ತಾವನೆ ವೇಳೆ ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ನ ಸದಸ್ಯ ಸೌಗತ ರಾಯ್ ಆದಾಯ ತೆರಿಗೆ ಕುರಿತು ಪ್ರಶ್ನೆ ಎತ್ತಿದ್ದರು. ಅದಕ್ಕೆ ಉತ್ತರವಾಗಿ ಸೀತಾರಾಮನ್, 'ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು, ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳು ಹಾಗೂ ಹೊರಹೊಮ್ಮುತ್ತಿರುವ ಆರ್ಥಿಕತೆಗಳ ನಡುವೆ ಹೋಲಿಕೆ ಭಿನ್ನವಾದುದಾಗಿದೆ. ಅವರಲ್ಲಿ ಆದಾಯ ತೆರಿಗೆ ಕಡಿತಗೊಳಿಸಲಾಗಿದೆ ಹಾಗಾಗಿ ನೀವು ಮಾಡಬೇಕು ಎಂದರೆ...' ಎಂದಿದ್ದರು.