ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್‌ ಪರಿಣಾಮ ಎದುರಿಸಲು ಸಜ್ಜಾಗಿ: ಬ್ಯಾಂಕ್‌ಗಳಿಗೆ ನಿರ್ಮಲಾ ಸೂಚನೆ

Last Updated 7 ಜನವರಿ 2022, 14:45 IST
ಅಕ್ಷರ ಗಾತ್ರ

ನವದೆಹಲಿ: ಓಮೈಕ್ರಾನ್‌ನಿಂದ ಆಗಬಹುದಾದ ಯಾವುದೇ ರೀತಿಯ ಪರಿಣಾಮ ಎದುರಿಸಲು ಸಿದ್ಧವಾಗುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದಾರೆ.

ವರ್ಚುವಲ್ ವೇದಿಕೆಯ ಮೂಲಕ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಪ್ರಮುಖರ ಜೊತೆ ಚರ್ಚೆ ನಡೆಸಿದ ಅವರು, ಕೋವಿಡ್‌ನಿಂದ ಸಮಸ್ಯೆ ಎದುರಿಸುವ ಕೃಷಿ, ರಿಟೇಲ್‌ ಮತ್ತು ಎಂಎಸ್‌ಎಂಇ ವಲಯಗಳಿಗೆ ನೆರವನ್ನು ಮುಂದುವರಿಸುವಂತೆ ಬ್ಯಾಂಕ್‌ಗಳಿಗೆ ತಿಳಿಸಿದರು.

ಕೋವಿಡ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಸೂಚಿಸಿರುವ ಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಬ್ಯಾಂಕ್‌ಗಳು ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದರು ಎಂದು ಹಣಕಾಸು ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT