ನವದೆಹಲಿ: ಓಮೈಕ್ರಾನ್ನಿಂದ ಆಗಬಹುದಾದ ಯಾವುದೇ ರೀತಿಯ ಪರಿಣಾಮ ಎದುರಿಸಲು ಸಿದ್ಧವಾಗುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಸೂಚನೆ ನೀಡಿದ್ದಾರೆ.
ವರ್ಚುವಲ್ ವೇದಿಕೆಯ ಮೂಲಕ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ಪ್ರಮುಖರ ಜೊತೆ ಚರ್ಚೆ ನಡೆಸಿದ ಅವರು, ಕೋವಿಡ್ನಿಂದ ಸಮಸ್ಯೆ ಎದುರಿಸುವ ಕೃಷಿ, ರಿಟೇಲ್ ಮತ್ತು ಎಂಎಸ್ಎಂಇ ವಲಯಗಳಿಗೆ ನೆರವನ್ನು ಮುಂದುವರಿಸುವಂತೆ ಬ್ಯಾಂಕ್ಗಳಿಗೆ ತಿಳಿಸಿದರು.
ಕೋವಿಡ್ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಆರ್ಬಿಐ ಸೂಚಿಸಿರುವ ಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಬ್ಯಾಂಕ್ಗಳು ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದರು ಎಂದು ಹಣಕಾಸು ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.