ನವದೆಹಲಿ: ದೇಶದ ಆರ್ಥಿಕತೆಯ ಮೇಲೆ ಕೋವಿಡ್–19ನಿಂದಾಗಿ ಆಗುತ್ತಿರುವ ಪರಿಣಾಮಗಳನ್ನು ಎದುರಿಸಿ, ಚೇತರಿಕೆ ನೀಡುವ ನಿಟ್ಟಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮಗ್ರವಾದ ಪ್ಯಾಕೇಜ್ ಘೋಷಿಸಿದ್ದಾರೆ.
ವಲಸೆ ಬಂದಿರುವ ಕಾರ್ಮಿಕರು, ಗ್ರಾಮೀಣ ಹಾಗೂ ನಗರ ಪ್ರದೇಶದ ಬಡ ಜನರಿಗಾಗಿ ₹1.7 ಲಕ್ಷ ಕೋಟಿ ಪ್ಯಾಕೇಜ್ ಸಿದ್ಧವಿರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಯಾರೂ ಸಹ ಹಸಿವಿನಿಂದ ಇರಲು ಬಿಡುವುದಿಲ್ಲ ಎಂದು ಹೇಳಿದರು.
* ಮುಂದಿನ 3 ತಿಂಗಳ ವರೆಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ನಡೆಯಲಿದೆ. ಇದರ ಅಡಿಯಲ್ಲಿ 80 ಕೋಟಿ ಬಡ ಜನರಿಗೆ ಅಗತ್ಯ ಆಹಾರ ಪದಾರ್ಥ ಸಿಗಲಿದೆ. ಈಗಾಗಲೇ ಪ್ರತಿ ವ್ಯಕ್ತಿಗೆ ನಿಗದಿಯಾಗಿರುವ 5ಕೆ.ಜಿ ಅಕ್ಕಿ ಅಥವಾ ಗೋದಿಯ ಜತೆಗೆ 5ಕೆ.ಜಿ. ಆಹಾರ ಪದಾರ್ಥ ಉಚಿತವಾಗಿ ಸಿಗಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ. ಬೇಳೆ (ಪ್ರಾಂತ್ಯಗಳಿಗೆ ಅನುಗುಣವಾಗಿ)ಸಿಗಲಿದೆ.
* ನಗದು ವರ್ಗಾವಣೆ ಯೋಜನೆ ಅಡಿಯಲ್ಲಿ ಅಂಗವಿಕಲರು, ರೈತರು ಹಾಗೂ ಬಡ ಪಿಂಚಣಿದಾರರನ್ನು ತಲುಪುವ ವ್ಯವಸ್ಥೆ ಮಾಡಲಾಗುತ್ತದೆ. 8.6 ಕೋಟಿ ರೈತರು ಏಪ್ರಿಲ್ ಮೊದಲ ವಾರದಲ್ಲಿ ₹2,000 ನೇರ ವರ್ಗಾವಣೆ ಅಡಿಯಲ್ಲಿ ಪಡೆಯಲಿದ್ದಾರೆ.
Government of India will pay the EPF contribution - of both employer and employee (10% each) - for the next three months, so that nobody suffers due to loss of continuity in EPF contribution, for (see 2/2)
— PIB in Maharashtra #StayHome 🇮🇳 (@PIBMumbai) March 26, 2020
- FM @nsitharaman #IndiaFightsCoronavirus
LIVE: https://t.co/H09jp9cJwU
*ಕೊರೊನಾ ವೈರಸ್ ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿರುವವರು, ಸೋಂಕಿನ ಅಪಾಯ ಇರುವವರಿಗೆ ಆರೋಗ್ಯ ವಿಮೆ ಒದಗಿಸಲಾಗುತ್ತದೆ.ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ವಿಮೆ.
* ಹಿರಿಯ ನಾಗರಿಕರು, ವಿಧವೆ, ಅಂಗವಿಕರಿಗೆ ಒಂದು ಬಾರಿಯ ಪರಿಹಾರ ಮೊತ್ತ ₹1,000 ಸಿಗಲಿದೆ. ಎರಡು ಕಂತುಗಳಲ್ಲಿ ಹಣ ಬಿಡುಗಡೆಯಾಗಲಿದ್ದು, ಸುಮಾರು 3 ಕೋಟಿ ಜನರಿಗೆ ಇದರಿಂದ ಅನುಕೂಲವಾಗಲಿದೆ.
* ಮಹಿಳಾ ಜನ ಧನ್ ಖಾತೆ ಹೊಂದಿರುವವರು ಪ್ರತಿ ತಿಂಗಳಿಗೆ ₹500 ಪಡೆಯಲಿದ್ದಾರೆ. ಇದು ಮುಂದಿನ 3 ತಿಂಗಳ ವರೆಗೂ ಮುಂದುವರಿಯಲಿದೆ.
* ಉಜ್ವಲ ಯೋಜನೆ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ಪಡೆದಿರುವ ಮಹಿಳೆಯರಿಗೆ 3 ತಿಂಗಳ ವರೆಗೂ ಮೂರು ಅನಿಲ ಸಿಲಿಂಡರ್ಗಳು ಉಚಿತವಾಗಿ ಪೂರೈಕೆಯಾಗಲಿದೆ. ಇದರಿಂದಾಗಿ 8 ಕೋಟಿ ಮಹಿಳೆಯರು ಲಾಭ ಪಡೆಯಲಿದ್ದಾರೆ.
* ಮುಂದಿನ ತಿಂಗಳ ಇಪಿಎಫ್ ಮೊತ್ತವನ್ನು (ಸಂಸ್ಥೆಗಳು ಮತ್ತು ಉದ್ಯೋಗಿಗಳ) ಸರ್ಕಾರವೇ ತುಂಬಲಿದೆ.
* 100 ಉದ್ಯೋಗಿಗಳು ಇರುವ ಸಂಸ್ಥೆ ಹಾಗೂ ತಿಂಗಳಿಗೆ ₹15,000ದ ವರೆಗೂ ವೇತನ ಪಡೆಯುತ್ತಿರುವ ಉದ್ಯೋಗಿಗಳಿರುವ ಸಂಸ್ಥೆಗಳಿಗೆ ಪಿಎಫ್ ಕೊಡುಗೆ.
* ಇಪಿಎಫ್ ಯೋಜನೆಗೆ ತಿದ್ದುಪಡಿ ತರಲಾಗುತ್ತದೆ. ಈ ಮೂಲಕ ಮರು ಪಾವತಿ ಮಾಡದಿರದ ವ್ಯವಸ್ಥೆಯಡಿ ಶೇ 75ರಷ್ಟು ಇಪಿಎಫ್ ಮುಂಗಡ ಮೊತ್ತ ಪಡೆಯಲು ಅವಕಾಶ ನೀಡಲಾಗುತ್ತದೆ. ಕಾರ್ಮಿಕರು 3 ತಿಂಗಳ ಸಂಬಳ ಅಥವಾ ಶೇ 75ರಷ್ಟು ಮುಂಗಡ ಮೊತ್ತ; ಇದರಲ್ಲಿ ಯಾವುದು ಕಡಿಮೆಯೋ ಅದನ್ನು ಪಡೆಯಬಹುದಾಗಿದೆ. ಇದರಿಂದ ಇಪಿಎಫ್ ನೋಂದಾಯಿಸಿರುವ ಸುಮಾರು 4.8 ಕೋಟಿ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.
The Provident Fund Scheme regulations will be amended because of #CoronavirusOutbreak
— PIB in Maharashtra #StayHome 🇮🇳 (@PIBMumbai) March 26, 2020
Workers can draw 75% of deposit or 3-month wages, whichever is lower, as non-refundable advance
Will benefit 4.8 crore workers registered with EPFO
- FM @nsitharaman#IndiaFightsCoronavirus pic.twitter.com/lmnTQv1WqK
* ಕಟ್ಟಡ ನಿರ್ಮಾಣ ಕಾರ್ಮಿಕರ ( ನೋಂದಾಯಿತ 3.5 ಕೋಟಿ ಕಾರ್ಮಿಕರು) ಪರಿಹಾರಕ್ಕಾಗಿ ರಾಜ್ಯ ಸರ್ಕಾರಗಳು ₹31,000 ಕೋಟಿ ನಿಧಿಯನ್ನು ಬಳಸಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
* ಡಿಸ್ಟ್ರಿಕ್ಟ್ ಮಿನೆರಲ್ ಫಂಡ್: ವೈದ್ಯಕೀಯ ಪರೀಕ್ಷೆ, ಆರೋಗ್ಯ ಸೇವೆಗಳಿಗಾಗಿ ರಾಜ್ಯ ಸರ್ಕಾರಗಳು ಈ ಫಂಡ್ನ ಬಳಕೆ ಮಾಡಿಕೊಳ್ಳುವಂತೆ ಕೇಂದ್ರ ಸೂಚಿಸಿದೆ
ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಹಣಕಾಸು ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿ, ಕೋವಿಡ್–19ನಿಂದ ಆರ್ಥಿಕತೆ ಮೇಲೆ ಆಗಿರುವ ಪ್ರಭಾವವನ್ನು ತಗ್ಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಹಾಗೂ ಆರ್ಥಿಕ ಚೇತರಿಕೆ ಪ್ಯಾಕೇಜ್ ಸಿದ್ಧಪಡಿಸುವಂತೆ ಸೂಚಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.