<p class="title"><strong>ನವದೆಹಲಿ:</strong> ಏರ್ ಇಂಡಿಯಾ ಖಾಸಗೀಕರಣದ ವಿಚಾರದಲ್ಲಿ ಕೇಂದ್ರ ಸರ್ಕಾರವು ಹಣಕಾಸಿನ ಬಿಡ್ಗಳನ್ನು ಮುಂದಿನ ಕೆಲವು ದಿನಗಳಲ್ಲಿ ಆಹ್ವಾನಿಸಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಹರದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.</p>.<p class="title">‘ಏರ್ ಇಂಡಿಯಾ ಕಂಪನಿಯನ್ನು ಖಾಸಗಿಯವರಿಗೆ ಮಾರಾಟ ಮಾಡಬೇಕು ಅಥವಾ ಕಂಪನಿಯನ್ನು ಮುಚ್ಚಬೇಕು. ಇವೆರಡನ್ನು ಹೊರತುಪಡಿಸಿದರೆ ಬೇರೆ ಆಯ್ಕೆ ಇಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p class="title">‘ಖಾಸಗಿಯವರು ಖರೀದಿ ಮಾಡುವವರೆಗೆ ಸರ್ಕಾರವೇ ಕಂಪನಿಯನ್ನು ನಡೆಸಿಕೊಂಡು ಹೋಗಬೇಕಿದೆ. ಬಿಡ್ಡರ್ಗಳಿಂದ ಹಣಕಾಸಿನ ಬಿಡ್ ಬಂದ ನಂತರ, ನಾವು ಕಂಪನಿಯನ್ನು ಖಾಸಗಿಯವರಿಗೆ ಹಸ್ತಾಂತರ ಮಾಡುವುದಷ್ಟೇ ಬಾಕಿ ಉಳಿಯಲಿದೆ’ ಎಂದು ಅವರು ಕಾರ್ಯಕ್ರಮವೊಂದರಲ್ಲಿ ವಿವರಿಸಿದ್ದಾರೆ.</p>.<p class="title">‘ಏರ್ ಇಂಡಿಯಾದ ನಿರ್ವಹಣೆ ಸರಿಯಾಗಿ ಇಲ್ಲದಿದ್ದ ಕಾರಣ ಒಟ್ಟು ಸಾಲದ ಮೊತ್ತವು ₹ 60 ಸಾವಿರ ಕೋಟಿ ಆಗಿದೆ. ನಾವು ಪ್ರತಿದಿನ ₹ 20 ಕೋಟಿ ನಷ್ಟ ಅನುಭವಿಸುತ್ತಿದ್ದೇವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಹೋಗಿ ಹಣ ಕೊಡಿ ಎಂದು ಕೇಳುವ ಶಕ್ತಿ ನನಗಿಲ್ಲ’ ಎಂದು ಪುರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಏರ್ ಇಂಡಿಯಾ ಖಾಸಗೀಕರಣದ ವಿಚಾರದಲ್ಲಿ ಕೇಂದ್ರ ಸರ್ಕಾರವು ಹಣಕಾಸಿನ ಬಿಡ್ಗಳನ್ನು ಮುಂದಿನ ಕೆಲವು ದಿನಗಳಲ್ಲಿ ಆಹ್ವಾನಿಸಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಹರದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.</p>.<p class="title">‘ಏರ್ ಇಂಡಿಯಾ ಕಂಪನಿಯನ್ನು ಖಾಸಗಿಯವರಿಗೆ ಮಾರಾಟ ಮಾಡಬೇಕು ಅಥವಾ ಕಂಪನಿಯನ್ನು ಮುಚ್ಚಬೇಕು. ಇವೆರಡನ್ನು ಹೊರತುಪಡಿಸಿದರೆ ಬೇರೆ ಆಯ್ಕೆ ಇಲ್ಲ’ ಎಂದೂ ಅವರು ಹೇಳಿದ್ದಾರೆ.</p>.<p class="title">‘ಖಾಸಗಿಯವರು ಖರೀದಿ ಮಾಡುವವರೆಗೆ ಸರ್ಕಾರವೇ ಕಂಪನಿಯನ್ನು ನಡೆಸಿಕೊಂಡು ಹೋಗಬೇಕಿದೆ. ಬಿಡ್ಡರ್ಗಳಿಂದ ಹಣಕಾಸಿನ ಬಿಡ್ ಬಂದ ನಂತರ, ನಾವು ಕಂಪನಿಯನ್ನು ಖಾಸಗಿಯವರಿಗೆ ಹಸ್ತಾಂತರ ಮಾಡುವುದಷ್ಟೇ ಬಾಕಿ ಉಳಿಯಲಿದೆ’ ಎಂದು ಅವರು ಕಾರ್ಯಕ್ರಮವೊಂದರಲ್ಲಿ ವಿವರಿಸಿದ್ದಾರೆ.</p>.<p class="title">‘ಏರ್ ಇಂಡಿಯಾದ ನಿರ್ವಹಣೆ ಸರಿಯಾಗಿ ಇಲ್ಲದಿದ್ದ ಕಾರಣ ಒಟ್ಟು ಸಾಲದ ಮೊತ್ತವು ₹ 60 ಸಾವಿರ ಕೋಟಿ ಆಗಿದೆ. ನಾವು ಪ್ರತಿದಿನ ₹ 20 ಕೋಟಿ ನಷ್ಟ ಅನುಭವಿಸುತ್ತಿದ್ದೇವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಹೋಗಿ ಹಣ ಕೊಡಿ ಎಂದು ಕೇಳುವ ಶಕ್ತಿ ನನಗಿಲ್ಲ’ ಎಂದು ಪುರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>