<p><strong>ನವದೆಹಲಿ</strong>: ಜುಲೈನಲ್ಲಿ ಆರಂಭವಾಗಲಿರುವ ಸಂಸತ್ನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ವಿಮಾ ತಿದ್ದುಪಡಿ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.</p>.<p>ಸರ್ಕಾರವು ವಿಮಾ ವಲಯದಲ್ಲಿ ಶೇ 100ರಷ್ಟು ವಿದೇಶಿ ನೇರ ಬಂಡವಾಳ (ಎಫ್ಡಿಐ) ಹೂಡಿಕೆಗೆ ಅವಕಾಶ ಕಲ್ಪಿಸಲು ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಸೂದೆ ಮಂಡಿಸಲಿದೆ ಎಂದು ಹೇಳಿವೆ.</p>.<p>ಸಂಸತ್ನಲ್ಲಿ ಮಂಡನೆಗೂ ಮೊದಲು ಕೇಂದ್ರ ಸಚಿವ ಸಂಪುಟದ ಮುಂದೆ ಕರಡು ಮಸೂದೆ ಮಂಡಿಸಲಾಗುತ್ತದೆ. ಇದಕ್ಕೆ ಅನುಮೋದನೆ ದೊರೆತ ಬಳಿಕ ಕೇಂದ್ರ ಹಣಕಾಸು ಸಚಿವಾಲಯದ ಅಧೀನದಲ್ಲಿ ಬರುವ ಹಣಕಾಸು ಸೇವೆಗಳ ಇಲಾಖೆಯು ಮಸೂದೆ ಮಂಡನೆಯ ಪ್ರಕ್ರಿಯೆಗಳನ್ನು ಆರಂಭಿಸಲಿದೆ ಎಂದು ಹೇಳಿವೆ. </p>.<p>ಪ್ರಸ್ತುತ ವಿಮಾ ವಲಯದಲ್ಲಿ ಶೇ 74ರಷ್ಟು ಎಫ್ಡಿಐ ಹೂಡಿಕೆಗೆ ಅವಕಾಶವಿದೆ. ಇದನ್ನು ಹೆಚ್ಚಿಸುವ ಮೂಲಕ ಎಲ್ಲಾ ವರ್ಗದ ಜನರಿಗೂ ವಿಮಾ ಸೌಲಭ್ಯ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಬಜೆಟ್ ಭಾಷಣದ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಪ್ರಸ್ತಾಪಿಸಿದ್ದರು.</p>.<p>ವಿಮಾದಾರರ ಹಿತರಕ್ಷಣೆ ಮತ್ತು ಅವರಿಗೆ ಹಣಕಾಸಿನ ಭದ್ರತೆ ಒದಗಿಸುವುದು ಪ್ರಸ್ತಾವಿತ ಮಸೂದೆಯ ಗುರಿಯಾಗಿದೆ. ಅಲ್ಲದೆ, ಹಲವು ಕಂಪನಿಗಳಿಗೆ ವಿಮಾ ಕ್ಷೇತ್ರ ಪ್ರವೇಶಿಸಲು ಅವಕಾಶ ಒದಗಿಸಲಿದೆ. ಆ ಮೂಲಕ ದೇಶದ ಆರ್ಥಿಕತೆ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದು ಸರ್ಕಾರದ ಉದ್ದೇಶವಾಗಿದೆ.</p>.<p>2047ರ ವೇಳೆಗೆ ದೇಶದ ಎಲ್ಲರಿಗೂ ವಿಮಾ ಸೌಲಭ್ಯ ನೀಡುವ ಗುರಿ ಹೊಂದಲಾಗಿದೆ. ಮಸೂದೆಯು ವಿಮಾ ವಲಯದ ಪರಿಣಾಮಕಾರಿ ಕಾರ್ಯ ನಿರ್ವಹಣೆಗೆ ಅವಕಾಶ ಕಲ್ಪಿಸಲಿದೆ ಎಂದು ಸರ್ಕಾರ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜುಲೈನಲ್ಲಿ ಆರಂಭವಾಗಲಿರುವ ಸಂಸತ್ನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ವಿಮಾ ತಿದ್ದುಪಡಿ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.</p>.<p>ಸರ್ಕಾರವು ವಿಮಾ ವಲಯದಲ್ಲಿ ಶೇ 100ರಷ್ಟು ವಿದೇಶಿ ನೇರ ಬಂಡವಾಳ (ಎಫ್ಡಿಐ) ಹೂಡಿಕೆಗೆ ಅವಕಾಶ ಕಲ್ಪಿಸಲು ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಸೂದೆ ಮಂಡಿಸಲಿದೆ ಎಂದು ಹೇಳಿವೆ.</p>.<p>ಸಂಸತ್ನಲ್ಲಿ ಮಂಡನೆಗೂ ಮೊದಲು ಕೇಂದ್ರ ಸಚಿವ ಸಂಪುಟದ ಮುಂದೆ ಕರಡು ಮಸೂದೆ ಮಂಡಿಸಲಾಗುತ್ತದೆ. ಇದಕ್ಕೆ ಅನುಮೋದನೆ ದೊರೆತ ಬಳಿಕ ಕೇಂದ್ರ ಹಣಕಾಸು ಸಚಿವಾಲಯದ ಅಧೀನದಲ್ಲಿ ಬರುವ ಹಣಕಾಸು ಸೇವೆಗಳ ಇಲಾಖೆಯು ಮಸೂದೆ ಮಂಡನೆಯ ಪ್ರಕ್ರಿಯೆಗಳನ್ನು ಆರಂಭಿಸಲಿದೆ ಎಂದು ಹೇಳಿವೆ. </p>.<p>ಪ್ರಸ್ತುತ ವಿಮಾ ವಲಯದಲ್ಲಿ ಶೇ 74ರಷ್ಟು ಎಫ್ಡಿಐ ಹೂಡಿಕೆಗೆ ಅವಕಾಶವಿದೆ. ಇದನ್ನು ಹೆಚ್ಚಿಸುವ ಮೂಲಕ ಎಲ್ಲಾ ವರ್ಗದ ಜನರಿಗೂ ವಿಮಾ ಸೌಲಭ್ಯ ಒದಗಿಸುವುದು ಸರ್ಕಾರದ ಗುರಿಯಾಗಿದೆ. ಬಜೆಟ್ ಭಾಷಣದ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಪ್ರಸ್ತಾಪಿಸಿದ್ದರು.</p>.<p>ವಿಮಾದಾರರ ಹಿತರಕ್ಷಣೆ ಮತ್ತು ಅವರಿಗೆ ಹಣಕಾಸಿನ ಭದ್ರತೆ ಒದಗಿಸುವುದು ಪ್ರಸ್ತಾವಿತ ಮಸೂದೆಯ ಗುರಿಯಾಗಿದೆ. ಅಲ್ಲದೆ, ಹಲವು ಕಂಪನಿಗಳಿಗೆ ವಿಮಾ ಕ್ಷೇತ್ರ ಪ್ರವೇಶಿಸಲು ಅವಕಾಶ ಒದಗಿಸಲಿದೆ. ಆ ಮೂಲಕ ದೇಶದ ಆರ್ಥಿಕತೆ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದು ಸರ್ಕಾರದ ಉದ್ದೇಶವಾಗಿದೆ.</p>.<p>2047ರ ವೇಳೆಗೆ ದೇಶದ ಎಲ್ಲರಿಗೂ ವಿಮಾ ಸೌಲಭ್ಯ ನೀಡುವ ಗುರಿ ಹೊಂದಲಾಗಿದೆ. ಮಸೂದೆಯು ವಿಮಾ ವಲಯದ ಪರಿಣಾಮಕಾರಿ ಕಾರ್ಯ ನಿರ್ವಹಣೆಗೆ ಅವಕಾಶ ಕಲ್ಪಿಸಲಿದೆ ಎಂದು ಸರ್ಕಾರ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>