<p><strong>ನವದೆಹಲಿ:</strong> ‘ಬಜೆಟ್ನಲ್ಲಿ ಘೋಷಿಸಲಾದ ವಿತ್ತೀಯ ಮತ್ತು ಹಣಕಾಸಿನ ಕ್ರಮಗಳು ಜನರಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲು ಸಹಾಯ ಮಾಡಲಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. </p>.<p>ಸರ್ಕಾರ ಮತ್ತು ಆರ್ಬಿಐ ದೇಶದ ಪ್ರಗತಿ ಹೆಚ್ಚಿಸಲು ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ನಿರಂತರವಾಗಿ ಕೆಲಸ ಮಾಡಲಿವೆ. ಇವೆರೆಡರ ನಡುವೆ (ಸರ್ಕಾರ ಮತ್ತು ಆರ್ಬಿಐ) ಉತ್ತಮ ಸಮನ್ವಯವಿದೆ ಎಂದು ಹೇಳಿದರು.</p>.<p>ಪ್ರಸಕ್ತ ವರ್ಷದ ಏಪ್ರಿಲ್-ಜೂನ್ಗಾಗಿ ಗ್ರಾಹಕ ಸರಕುಗಳಿಗೆ (ಎಫ್ಎಂಸಿಜಿ) ಬೇಡಿಕೆಗಳು ಈಗಾಗಲೇ ಸಲ್ಲಿಕೆ ಆಗಿವೆ. ಇದು ಗ್ರಾಹಕರಿಂದ ಹೆಚ್ಚುತ್ತಿರುವ ಬೇಡಿಕೆಯನ್ನು ತೋರಿಸುತ್ತದೆ ಎಂದು ಶನಿವಾರ ನಡೆದ ಆರ್ಬಿಐನ ಮಂಡಳಿಯ ಸಭೆ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.</p>.<p>ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಮಂಡಿಸಿದ 2025–26ನೇ ಆರ್ಥಿಕ ವರ್ಷದ ಬಜೆಟ್ನಲ್ಲಿ ಮಧ್ಯಮ ವರ್ಗದ ಜನರಿಗೆ ತೆರಿಗೆ ಹೊರೆ ಕಡಿಮೆ ಮಾಡಲು ₹12.75 ಲಕ್ಷದವರೆಗೆ ಆದಾಯಕ್ಕೆ ತೆರಿಗೆ ಇಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದರು. ಇದರಿಂದ 1 ಕೋಟಿ ತೆರಿಗೆದಾರರಿಗೆ ಅನುಕೂಲ ಆಗಲಿದೆ ಎಂದು ಹೇಳಿದ್ದರು.</p>.<p>ಶುಕ್ರವಾರ ನಡೆದ ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯು, 5 ವರ್ಷಗಳ ಬಳಿಕ ರೆಪೊ ದರದಲ್ಲಿ ಶೇ0.25ರಷ್ಟು ಕಡಿತಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬಜೆಟ್ನಲ್ಲಿ ಘೋಷಿಸಲಾದ ವಿತ್ತೀಯ ಮತ್ತು ಹಣಕಾಸಿನ ಕ್ರಮಗಳು ಜನರಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಖಾಸಗಿ ಹೂಡಿಕೆಗೆ ಉತ್ತೇಜನ ನೀಡಲು ಸಹಾಯ ಮಾಡಲಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. </p>.<p>ಸರ್ಕಾರ ಮತ್ತು ಆರ್ಬಿಐ ದೇಶದ ಪ್ರಗತಿ ಹೆಚ್ಚಿಸಲು ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ನಿರಂತರವಾಗಿ ಕೆಲಸ ಮಾಡಲಿವೆ. ಇವೆರೆಡರ ನಡುವೆ (ಸರ್ಕಾರ ಮತ್ತು ಆರ್ಬಿಐ) ಉತ್ತಮ ಸಮನ್ವಯವಿದೆ ಎಂದು ಹೇಳಿದರು.</p>.<p>ಪ್ರಸಕ್ತ ವರ್ಷದ ಏಪ್ರಿಲ್-ಜೂನ್ಗಾಗಿ ಗ್ರಾಹಕ ಸರಕುಗಳಿಗೆ (ಎಫ್ಎಂಸಿಜಿ) ಬೇಡಿಕೆಗಳು ಈಗಾಗಲೇ ಸಲ್ಲಿಕೆ ಆಗಿವೆ. ಇದು ಗ್ರಾಹಕರಿಂದ ಹೆಚ್ಚುತ್ತಿರುವ ಬೇಡಿಕೆಯನ್ನು ತೋರಿಸುತ್ತದೆ ಎಂದು ಶನಿವಾರ ನಡೆದ ಆರ್ಬಿಐನ ಮಂಡಳಿಯ ಸಭೆ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.</p>.<p>ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಮಂಡಿಸಿದ 2025–26ನೇ ಆರ್ಥಿಕ ವರ್ಷದ ಬಜೆಟ್ನಲ್ಲಿ ಮಧ್ಯಮ ವರ್ಗದ ಜನರಿಗೆ ತೆರಿಗೆ ಹೊರೆ ಕಡಿಮೆ ಮಾಡಲು ₹12.75 ಲಕ್ಷದವರೆಗೆ ಆದಾಯಕ್ಕೆ ತೆರಿಗೆ ಇಲ್ಲ ಎಂಬ ನಿರ್ಧಾರ ಪ್ರಕಟಿಸಿದ್ದರು. ಇದರಿಂದ 1 ಕೋಟಿ ತೆರಿಗೆದಾರರಿಗೆ ಅನುಕೂಲ ಆಗಲಿದೆ ಎಂದು ಹೇಳಿದ್ದರು.</p>.<p>ಶುಕ್ರವಾರ ನಡೆದ ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯು, 5 ವರ್ಷಗಳ ಬಳಿಕ ರೆಪೊ ದರದಲ್ಲಿ ಶೇ0.25ರಷ್ಟು ಕಡಿತಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>