ದೇಶದ ಹಿತದೃಷ್ಟಿಯಿಂದ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕಿದೆ. ಹಾಗಾಗಿ, ಹಣಕಾಸು ಸಂಸ್ಥೆಗಳು ಮತ್ತು ಮಧ್ಯಸ್ಥಿಕೆದಾರರು, ಸಂಶಯ ಮೂಡಿಸುವ ವ್ಯವಹಾರಗಳ ಬಗ್ಗೆ ವರದಿ ಸಲ್ಲಿಸುವುದು ಕಡ್ಡಾಯ. ಇಂತಹ ವರದಿಗಳ ವಿಶ್ಲೇಷಣೆ ಮೂಲಕ ದೇಶದ ತನಿಖಾ ಸಂಸ್ಥೆಗಳು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದೆ.