ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಫ್ಕೆಸಿಸಿಐ ಅಧ್ಯಕ್ಷ ಡಾ.ಐ.ಎಸ್. ಪ್ರಸಾದ್, ‘ಪ್ಯಾಕ್ ಮಾಡಿರುವ, ಲೇಬಲ್ ಅಂಟಿಸಿರುವ ಧಾನ್ಯಗಳಿಗೆ ತೆರಿಗೆ ವಿಧಿಸುವುದರಿಂದ ರೈತರಿಗೆ ಹಾಗೂ ವರ್ತಕರಿಗೆ ಅನಗತ್ಯ ಹೊರೆಯಾಗುತ್ತದೆ. ಹೀಗಾಗಿ, ಈ ತೆರಿಗೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವುದನ್ನು ಮುಂದಕ್ಕೆ ಹಾಕಬೇಕು’ ಎಂದು ಒತ್ತಾಯಿಸಿದರು.