<p>ಬೆಂಗಳೂರು: ‘ದೇಶದ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸಲು ಕಾಲೇಜು ಶಿಕ್ಷಣ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಉದ್ಯಮದ ಬಗ್ಗೆ ಅರಿವು ನೀಡಿ, ಅವರನ್ನು ಉದ್ಯಮಿಗಳಾಗಿ ರೂಪಿಸುವ ಅಗತ್ಯವಿದೆ’ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು.</p>.<p>ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್ಕೆಸಿಸಿಐ) ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ‘ಎಫ್ಕೆಸಿಸಿಐನ ಇನ್ನೊ ಮಂಥನ್’ 18ನೇ ಆವೃತ್ತಿಗೆ ಅವರು ಸೋಮವಾರ ಚಾಲನೆ ನೀಡಿದರು.</p>.<p>‘ಮಂಥನ್’ ಕಾರ್ಯಕ್ರಮದ ಪ್ರಯೋಜನವು ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೂ ಲಭಿಸಬೇಕು ಎನ್ನುವ ಆಶಯದಿಂದ ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ಎಫ್ಕೆಸಿಸಿಐ ಜೊತೆ ಸಹಯೋಗ ಮಾಡಿಕೊಂಡಿದೆ. ವಿದ್ಯಾರ್ಥಿಗಳು ತಮ್ಮ ಬಳಿ ಇರುವ ಉದ್ಯಮದ ಯೋಜನೆಯನ್ನು ಇದರಲ್ಲಿ ಪ್ರಸ್ತುತಪಡಿಸಬಹುದು. ಉತ್ತಮ ಯೋಜನೆಗಳಿಗೆ ₹25 ಲಕ್ಷದವರೆಗೆ ಬಹುಮಾನ ನೀಡಲಾಗುವುದು ಎಂದರು.</p>.<p>‘ರಾಜ್ಯದ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳು ತಮ್ಮಲ್ಲಿನ ಹೊಸ ಉದ್ಯಮ ಯೋಜನೆಯನ್ನು ಎಫ್ಕೆಸಿಸಿಐ ವೆಬ್ಸೈಟ್ನಲ್ಲಿ ದಾಖಲಿಸಬೇಕು’ ಎಂದು ‘ಇನ್ನೊ ಮಂಥನ್ 2026’ ಅಧ್ಯಕ್ಷ ಶ್ರವಣ್ ಗುಡುತ್ತೂರ್ ಹೇಳಿದರು.</p>.<p>ವಿದ್ಯಾರ್ಥಿಗಳು <strong>manthan.fkcci.org</strong>ಗೆ ಲಾಗಿನ್ ಆಗಿ, 2026ರ ಜನವರಿ 31ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಉದ್ಯಮದ ಯೋಜನೆ ಸಲ್ಲಿಸಲು ಏಪ್ರಿಲ್ 8 ಕೊನೆಯ ದಿನ. ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದರು.</p>.<p>‘ವಿದ್ಯಾರ್ಥಿಗಳು ಪದವಿ ಪಡೆದರಷ್ಟೇ ಸಾಲದು, ಅವರನ್ನು ಯಶಸ್ವಿ ಉದ್ಯಮಿಗಳನ್ನಾಗಿಸುವ ಉದ್ದೇಶವನ್ನು ಹೊಂದಲಾಗಿದೆ. ಮಂಥನ್ನಂತಹ ವೇದಿಕೆ ಇದಕ್ಕೆ ಅವಕಾಶ ಕಲ್ಪಿಸುತ್ತಿದೆ’ ಎಂದು ಎಫ್ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ದೇಶದ ಆರ್ಥಿಕ ವ್ಯವಸ್ಥೆಯನ್ನು ಸದೃಢಗೊಳಿಸಲು ಕಾಲೇಜು ಶಿಕ್ಷಣ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಉದ್ಯಮದ ಬಗ್ಗೆ ಅರಿವು ನೀಡಿ, ಅವರನ್ನು ಉದ್ಯಮಿಗಳಾಗಿ ರೂಪಿಸುವ ಅಗತ್ಯವಿದೆ’ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು.</p>.<p>ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್ಕೆಸಿಸಿಐ) ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ‘ಎಫ್ಕೆಸಿಸಿಐನ ಇನ್ನೊ ಮಂಥನ್’ 18ನೇ ಆವೃತ್ತಿಗೆ ಅವರು ಸೋಮವಾರ ಚಾಲನೆ ನೀಡಿದರು.</p>.<p>‘ಮಂಥನ್’ ಕಾರ್ಯಕ್ರಮದ ಪ್ರಯೋಜನವು ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೂ ಲಭಿಸಬೇಕು ಎನ್ನುವ ಆಶಯದಿಂದ ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ಎಫ್ಕೆಸಿಸಿಐ ಜೊತೆ ಸಹಯೋಗ ಮಾಡಿಕೊಂಡಿದೆ. ವಿದ್ಯಾರ್ಥಿಗಳು ತಮ್ಮ ಬಳಿ ಇರುವ ಉದ್ಯಮದ ಯೋಜನೆಯನ್ನು ಇದರಲ್ಲಿ ಪ್ರಸ್ತುತಪಡಿಸಬಹುದು. ಉತ್ತಮ ಯೋಜನೆಗಳಿಗೆ ₹25 ಲಕ್ಷದವರೆಗೆ ಬಹುಮಾನ ನೀಡಲಾಗುವುದು ಎಂದರು.</p>.<p>‘ರಾಜ್ಯದ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳು ತಮ್ಮಲ್ಲಿನ ಹೊಸ ಉದ್ಯಮ ಯೋಜನೆಯನ್ನು ಎಫ್ಕೆಸಿಸಿಐ ವೆಬ್ಸೈಟ್ನಲ್ಲಿ ದಾಖಲಿಸಬೇಕು’ ಎಂದು ‘ಇನ್ನೊ ಮಂಥನ್ 2026’ ಅಧ್ಯಕ್ಷ ಶ್ರವಣ್ ಗುಡುತ್ತೂರ್ ಹೇಳಿದರು.</p>.<p>ವಿದ್ಯಾರ್ಥಿಗಳು <strong>manthan.fkcci.org</strong>ಗೆ ಲಾಗಿನ್ ಆಗಿ, 2026ರ ಜನವರಿ 31ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಉದ್ಯಮದ ಯೋಜನೆ ಸಲ್ಲಿಸಲು ಏಪ್ರಿಲ್ 8 ಕೊನೆಯ ದಿನ. ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದರು.</p>.<p>‘ವಿದ್ಯಾರ್ಥಿಗಳು ಪದವಿ ಪಡೆದರಷ್ಟೇ ಸಾಲದು, ಅವರನ್ನು ಯಶಸ್ವಿ ಉದ್ಯಮಿಗಳನ್ನಾಗಿಸುವ ಉದ್ದೇಶವನ್ನು ಹೊಂದಲಾಗಿದೆ. ಮಂಥನ್ನಂತಹ ವೇದಿಕೆ ಇದಕ್ಕೆ ಅವಕಾಶ ಕಲ್ಪಿಸುತ್ತಿದೆ’ ಎಂದು ಎಫ್ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>