ಎಫ್ಕೆಸಿಸಿಐ ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಬ್ಬಾರ್ ಅವರು, ‘ಮಸೂದೆಯಿಂದ ಸಣ್ಣ ಉದ್ದಿಮೆಗಳಿಗೆ ತೊಂದರೆ ಆಗದಂತೆ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಕಾರ್ಮಿಕ ವಿರೋಧಿ ನೀತಿಯನ್ನು ಸರ್ಕಾರ ತಾಳಿದೆ ಎನ್ನುವ ಸಂದೇಶ ಕಾರ್ಮಿಕ ವರ್ಗಕ್ಕೂ ಹೋಗದ ರೀತಿಯಲ್ಲಿ ಬಹಳ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.