<p><strong>ಬೆಂಗಳೂರು: </strong>‘ಸಾಧ್ಯವಿರುವ ಕಡೆಗಳಲ್ಲೆಲ್ಲ ಮನೆಯಿಂದ ಕೆಲಸ ಮಾಡುವ ವ್ಯವಸ್ಥೆ ಮಾಡಿ. 45 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು ಕೋವಿಡ್–19 ಲಸಿಕೆ ಪಡೆಯುವಂತೆ ನೋಡಿಕೊಳ್ಳಿ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಉದ್ಯಮ ವಲಯಕ್ಕೆ ಸಲಹೆ ನೀಡಿದರು.</p>.<p>ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್ಕೆಸಿಸಿಐ) ಕೋವಿಡ್–19 ಪರಿಸ್ಥಿತಿಯ ಕುರಿತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದ ಅವರು, ‘ಆರ್ಥಿಕತೆ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಕೊರೊನಾ ಎರಡನೇ ಅಲೆ ಬಂದಿದೆ. ಇದನ್ನು ನಿಯಂತ್ರಿಸಲು ಸರ್ಕಾರ ಎಲ್ಲ ಪ್ರಯತ್ನಗಳನ್ನೂ ನಡೆಸುತ್ತಿದೆ. ಕೈಗಾರಿಕೆ, ಸೇವಾ ವಲಯ ಹಾಗೂ ವ್ಯಾಪಾರಸ್ಥರು ಸರ್ಕಾರದೊಂದಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>ಮೈಸೂರಿನಲ್ಲಿ ರೆಮಿಡಿಸೀರ್ ಅನ್ನು ಕದ್ದುಸಾಗಿಸುವುದು ಮತ್ತು ಮಾರಾಟ ಮಾಡುವುದು ನಡೆಯುತ್ತಿದೆ ಎಂದು ಒಕ್ಕೂಟದ ಮಾಜಿ ಅಧ್ಯಕ್ಷ ಸುಧಾಕರ್ ಶೆಟ್ಟಿ ಅವರು ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಧಾಕರ್, ‘ಲಸಿಕೆ ಕಳ್ಳಸಾಗಣೆ, ದುಪ್ಪಟ್ಟು ಬೆಲೆಗೆ ಮಾರಾಟ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತಹ ಪ್ರಕರಣಗಳು ಗಮನಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸಾಧ್ಯವಿರುವ ಕಡೆಗಳಲ್ಲೆಲ್ಲ ಮನೆಯಿಂದ ಕೆಲಸ ಮಾಡುವ ವ್ಯವಸ್ಥೆ ಮಾಡಿ. 45 ವರ್ಷಕ್ಕಿಂತ ಹೆಚ್ಚು ವಯಸ್ಸಾದವರು ಕೋವಿಡ್–19 ಲಸಿಕೆ ಪಡೆಯುವಂತೆ ನೋಡಿಕೊಳ್ಳಿ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಉದ್ಯಮ ವಲಯಕ್ಕೆ ಸಲಹೆ ನೀಡಿದರು.</p>.<p>ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್ಕೆಸಿಸಿಐ) ಕೋವಿಡ್–19 ಪರಿಸ್ಥಿತಿಯ ಕುರಿತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದ ಅವರು, ‘ಆರ್ಥಿಕತೆ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಕೊರೊನಾ ಎರಡನೇ ಅಲೆ ಬಂದಿದೆ. ಇದನ್ನು ನಿಯಂತ್ರಿಸಲು ಸರ್ಕಾರ ಎಲ್ಲ ಪ್ರಯತ್ನಗಳನ್ನೂ ನಡೆಸುತ್ತಿದೆ. ಕೈಗಾರಿಕೆ, ಸೇವಾ ವಲಯ ಹಾಗೂ ವ್ಯಾಪಾರಸ್ಥರು ಸರ್ಕಾರದೊಂದಿಗೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.</p>.<p>ಮೈಸೂರಿನಲ್ಲಿ ರೆಮಿಡಿಸೀರ್ ಅನ್ನು ಕದ್ದುಸಾಗಿಸುವುದು ಮತ್ತು ಮಾರಾಟ ಮಾಡುವುದು ನಡೆಯುತ್ತಿದೆ ಎಂದು ಒಕ್ಕೂಟದ ಮಾಜಿ ಅಧ್ಯಕ್ಷ ಸುಧಾಕರ್ ಶೆಟ್ಟಿ ಅವರು ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸುಧಾಕರ್, ‘ಲಸಿಕೆ ಕಳ್ಳಸಾಗಣೆ, ದುಪ್ಪಟ್ಟು ಬೆಲೆಗೆ ಮಾರಾಟ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತಹ ಪ್ರಕರಣಗಳು ಗಮನಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>