ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ದಿನಸಿ, ಬೇಕರಿ, ಕಾಫಿ ಪುಡಿ ಅಂಗಡಿಗಳನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ತೆರೆಯಲು ಅವಕಾಶ ನೀಡಬೇಕು. ಇದರಿಂದ ಎಲ್ಲರಿಗೂ ಅನುಕೂಲ ಆಗುತ್ತದೆ. ದಿನಸಿ ಅಂಗಡಿಗಳಿಗೆ ಪೂರೈಕೆಯಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಲು ಎಪಿಎಂಸಿಗಳನ್ನು ಮಧ್ಯಾಹ್ನ 2ರವರೆಗೆ ಅಥವಾ ದಿನಬಿಟ್ಟು ದಿನ ತೆರೆಯುವ ಅಗತ್ಯ ಇದೆ ಎಂದು ಸುಂದರ್ ಅವರು ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.