ದೇಶದಲ್ಲಿ ನವೋದ್ಯಮ ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಆಯ್ದ ರಾಜ್ಯಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆಂಧ್ರಪ್ರದೇಶ, ರಾಜಸ್ಥಾನ, ಗುಜರಾತ್, ಕರ್ನಾಟಕ ಮತ್ತು ನವದೆಹಲಿ ಈ ಕಾರ್ಯಕ್ರಮ ಆಯೋಜಿಸಲು ಮುಂದೆ ಬಂದಿವೆ. ಈ ರಾಜ್ಯಗಳಲ್ಲಿ ಶೃಂಗ ನಡೆದ ನಂತರದಲ್ಲಿ, ಬೇರೆ ರಾಜ್ಯಗಳ ನವೋದ್ಯಮಗಳಿಗೂ ಭಾಗವಹಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ವರ್ಚುವಲ್ ಆಗಿ ನವೋದ್ಯಮಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಎಫ್ಕೆಸಿಸಿಐ ಅಧ್ಯಕ್ಷ ಐ.ಎಸ್. ಪ್ರಸಾದ್ ತಿಳಿಸಿದ್ದಾರೆ.