‘ಜೌಗು ಪ್ರದೇಶಗಳ ಸಂರಕ್ಷಣೆಯಲ್ಲಿ ಸ್ಥಳೀಯ ಸಮುದಾಯಗಳು ಯಾವಾಗಲೂ ಮುಂಚೂಣಿಯಲ್ಲಿವೆ. ಈ ಪ್ರದೇಶಗಳ ಅತ್ಯುತ್ತಮ ಬಳಕೆ ಉತ್ತೇಜಿಸಲು ಮತ್ತು ಜೀವವೈವಿಧ್ಯತೆ, ಇಂಗಾಲದ ದಾಸ್ತಾನು ಹೆಚ್ಚಿಸುವ ಉದ್ದೇಶದಿಂದ ಅಮೃತ್ ಧರೋಹರ್ ಯೋಜನೆ ಜಾರಿಗೆ ತರಲಾಗುತ್ತಿದೆ. ಇದರಿಂದ ಪರಿಸರ ಪ್ರವಾಸೋದ್ಯಮ ಅವಕಾಶಗಳು ಮತ್ತು ಸ್ಥಳೀಯ ಸಮುದಾಯಗಳಿಗೆ ಆದಾಯ ಮೂಲವು ಸೃಷ್ಟಿಯಾಗಲಿದೆ’ ಎಂದು ನಿರ್ಮಲಾ ತಿಳಿಸಿದರು.