ವಾಷಿಂಗ್ಟನ್: ಆರ್ಥಿಕತೆಯು ಸುಸ್ಥಿರ ಬೆಳವಣಿಗೆ ಮತ್ತು ಹಣದುಬ್ಬರಕ್ಕೆ ನಿಯಂತ್ರಣಕ್ಕೆ ಪೂರಕವಾಗಿ ಮುಂದಿನ ವರ್ಷದ ಬಜೆಟ್ ಅನ್ನು ಎಚ್ಚರಿಕೆಯಿಂದ ರೂಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇಂಧನ ದರವು ಗರಿಷ್ಠ ಮಟ್ಟದಲ್ಲಿ ಇರುವುದೇ ದೇಶದ ಆರ್ಥಿಕತೆಗೆ ಅತಿದೊಡ್ಡ ಸವಾಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮತ್ತು ವಿಶ್ವಬ್ಯಾಂಕ್ನ ಸಭೆಯಲ್ಲಿ ಭಾಗವಹಿಸಲು ಅವರು ಇಲ್ಲಿಗೆ ಬಂದಿದ್ದಾರೆ.
ಮುಂದಿನ ಬಜೆಟ್ ಬಗ್ಗೆ ಈಗಲೇ ನಿರ್ದಿಷ್ಟವಾಗಿ ಹೇಳುವುದು ಕಷ್ಟ. ಆದರೆ, ಒಟ್ಟಾರೆಯಾಗಿ ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಲಾಗುವುದು. ಹಣದುಬ್ಬರದ ಆತಂಕವನ್ನೂ ಪರಿಹರಿಸಲಾಗುವುದು ಎಂದಿದ್ದಾರೆ.